5:23 AM Sunday28 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಸಾಮಾಜಿಕ ಸುಧಾರಣೆಯ ಹರಿಕಾರ‌ ಕುದ್ಮುಲ್ ರಂಗರಾವ್ 166ನೇ ಜನ್ಮದಿನ: ಬಿಜೆಪಿಯಿಂದ ಸ್ಮಾರಕಕ್ಕೆ ಪುಷ್ಪ ನಮನ

29/06/2025, 23:37

ಮಂಗಳೂರು(reporterkarnataka.com):ದಲಿತೋದ್ಧಾರಕ, ಸಾಮಾಜಿಕ ಸುಧಾರಣೆಯ ಹರಿಕಾರ, ಪೂಜನೀಯ ಕುದ್ಮುಲ್ ರಂಗರಾವ್ ರವರ 166 ನೇ ಜನ್ಮದಿನದಂದು, ಕುದ್ಮುಲ್ ರಂಗರಾವ್ ಎಜುಕೇಶನ್ ಟ್ರಸ್ಟ್, ಬಿಜೆಪಿ ಮಂಗಳೂರು ನಗರ ದಕ್ಷಿಣದ ವತಿಯಿಂದ ನಗರದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಸಾರಸ್ವತ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ್ದ ರಂಗರಾಯರು ಶೋಷಿತರ ಅಭಿವೃದ್ಧಿಗಾಗಿ ತಮ್ಮ ಇಡೀ ಬದುಕನ್ನು ಮುಡಿಪಾಗಿಟ್ಟ ಮಹಾನ್ ಮಾನವತಾವಾದಿಗಳು. ಸಮಾಜದಲ್ಲಿ ಎಲ್ಲರಂತೆ ದಲಿತರೂ ಸಹ ಸ್ವಾಭಿಮಾನ, ಆತ್ಮ ಗೌರವದಿಂದ ಬದುಕಬೇಕು. ಅವರೂ ಸಹ ಉನ್ನತ ಶಿಕ್ಷಣ ಪಡೆದು ಸಮಾಜದ ಮುನ್ನಲೆಗೆ ಬರಬೇಕೆಂದು ತೀವ್ರ ಕಾಳಜಿ ವಹಿಸಿ ವಿರೋಧದ ನಡುವೆಯೂ ವಿಶೇಷ ಶಾಲೆಗಳನ್ನು ತೆರೆದರು. ಅಸ್ಪೃಶ್ಯತೆ ಹಾಗೂ ಶೋಷಣೆಯ ವಿರುದ್ಧ ಹೋರಾಡಿದ ಅವರನ್ನು ಮಹಾತ್ಮ ಗಾಂಧೀಜಿಯವರೂ ಸಹ ನನ್ನ ಗುರು ಎಂದು ಹೇಳಿಕೊಂಡಿದ್ದರು. ನಾನು ಮೊದಲ ಬಾರಿ ಚುನಾವಣೆಗೆ ನಿಂತಾಗ ಪೂಜ್ಯರ ಸಮಾಧಿಗೆ ಭೇಟಿ ನೀಡಿ ನಮಸ್ಕರಿಸಿದ ನಂತರವೇ ನಾಮಪತ್ರ ಸಲ್ಲಿಸಿದ್ದೆ. ಇಂತಹ ಮಹಾ ಮಾನವತಾವಾದಿಗಳ ಜನ್ಮದಿನವನ್ನು ಬಿಜೆಪಿ ಆಡಳಿತದ ಅವಧಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಜಿಲ್ಲಾಡಳಿತದ ಮೂಲಕ ಪ್ರತಿವರ್ಷ ವಿಶೇಷವಾಗಿ ಆಚರಣೆ ಮಾಡಲಾಗುತ್ತಿತ್ತು. ಅದಕ್ಕಾಗಿ ಪಾಲಿಕೆಯಲ್ಲಿ ಅನುದಾನವನ್ನೂ ನಿಗದಿಪಡಿಸಲಾಗಿತ್ತು.
ಆದರೆ ಇದೀಗ ಆಡಳಿತದಲ್ಲಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ. ದಲಿತ ಸಮುದಾಯದ ಏಳಿಗೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಶ್ರೇಷ್ಠ ವ್ಯಕ್ತಿಯ ಜನ್ಮದಿನವನ್ನು ಆಚರಿಸದ ಸರ್ಕಾರದ ನಡೆಗೆ ದಲಿತ ಬಂಧುಗಳು ಬೇಸರ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಅವಧಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಸುಮಾರು ಮೂರುವರೆ ಕೋಟಿ ವೆಚ್ಚದಲ್ಲಿ ಪೂಜ್ಯರ ಸಮಾಧಿಯ ಉನ್ನತೀಕರಣಕ್ಕೆ ಶಿಲನ್ಯಾಸವನ್ನು ನೆರವೇರಿಸಲಾಗಿತ್ತು. ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಅದಕ್ಕೂ ತಡೆ ನೀಡಿರುವುದು ದುರಂತ ಎಂದರು.

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರಾದ ವಾದಿರಾಜ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಕುದ್ಮುಲ್ ರಂಗರಾವ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಬಿ.ಆರ್ ಹೃದಯನಾಥ್, ಉಪಾಧ್ಯಕ್ಷರಾದ ಶಾಮ ಕರ್ಕೇರ, ಪ್ರಧಾನ ಕಾರ್ಯದರ್ಶಿ ರಘುವೀರ್ ಬಾಬುಗುಡ್ಡ, ಉಪನ್ಯಾಸಕರಾದ ಪುಟ್ಟಸ್ವಾಮಿ, ಬಿಜೆಪಿ ಪ್ರಮುಖರಾದ ಮಾಜಿ ಮೇಯರ್ ಮನೋಜ್ ಕುಮಾರ್, ಭರತ್ ಕುಮಾರ್, ಮೋಹನ್ ಪೂಜಾರಿ, ಅಶ್ವಿತ್ ಕೊಟ್ಟಾರಿ, ಸೇರಿದಂತೆ ಟ್ರಸ್ಟ್ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು