6:39 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಸಾಮಾಜಿಕ ಸುಧಾರಣೆಯ ಹರಿಕಾರ‌ ಕುದ್ಮುಲ್ ರಂಗರಾವ್ 166ನೇ ಜನ್ಮದಿನ: ಬಿಜೆಪಿಯಿಂದ ಸ್ಮಾರಕಕ್ಕೆ ಪುಷ್ಪ ನಮನ

29/06/2025, 23:37

ಮಂಗಳೂರು(reporterkarnataka.com):ದಲಿತೋದ್ಧಾರಕ, ಸಾಮಾಜಿಕ ಸುಧಾರಣೆಯ ಹರಿಕಾರ, ಪೂಜನೀಯ ಕುದ್ಮುಲ್ ರಂಗರಾವ್ ರವರ 166 ನೇ ಜನ್ಮದಿನದಂದು, ಕುದ್ಮುಲ್ ರಂಗರಾವ್ ಎಜುಕೇಶನ್ ಟ್ರಸ್ಟ್, ಬಿಜೆಪಿ ಮಂಗಳೂರು ನಗರ ದಕ್ಷಿಣದ ವತಿಯಿಂದ ನಗರದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಸಾರಸ್ವತ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ್ದ ರಂಗರಾಯರು ಶೋಷಿತರ ಅಭಿವೃದ್ಧಿಗಾಗಿ ತಮ್ಮ ಇಡೀ ಬದುಕನ್ನು ಮುಡಿಪಾಗಿಟ್ಟ ಮಹಾನ್ ಮಾನವತಾವಾದಿಗಳು. ಸಮಾಜದಲ್ಲಿ ಎಲ್ಲರಂತೆ ದಲಿತರೂ ಸಹ ಸ್ವಾಭಿಮಾನ, ಆತ್ಮ ಗೌರವದಿಂದ ಬದುಕಬೇಕು. ಅವರೂ ಸಹ ಉನ್ನತ ಶಿಕ್ಷಣ ಪಡೆದು ಸಮಾಜದ ಮುನ್ನಲೆಗೆ ಬರಬೇಕೆಂದು ತೀವ್ರ ಕಾಳಜಿ ವಹಿಸಿ ವಿರೋಧದ ನಡುವೆಯೂ ವಿಶೇಷ ಶಾಲೆಗಳನ್ನು ತೆರೆದರು. ಅಸ್ಪೃಶ್ಯತೆ ಹಾಗೂ ಶೋಷಣೆಯ ವಿರುದ್ಧ ಹೋರಾಡಿದ ಅವರನ್ನು ಮಹಾತ್ಮ ಗಾಂಧೀಜಿಯವರೂ ಸಹ ನನ್ನ ಗುರು ಎಂದು ಹೇಳಿಕೊಂಡಿದ್ದರು. ನಾನು ಮೊದಲ ಬಾರಿ ಚುನಾವಣೆಗೆ ನಿಂತಾಗ ಪೂಜ್ಯರ ಸಮಾಧಿಗೆ ಭೇಟಿ ನೀಡಿ ನಮಸ್ಕರಿಸಿದ ನಂತರವೇ ನಾಮಪತ್ರ ಸಲ್ಲಿಸಿದ್ದೆ. ಇಂತಹ ಮಹಾ ಮಾನವತಾವಾದಿಗಳ ಜನ್ಮದಿನವನ್ನು ಬಿಜೆಪಿ ಆಡಳಿತದ ಅವಧಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಜಿಲ್ಲಾಡಳಿತದ ಮೂಲಕ ಪ್ರತಿವರ್ಷ ವಿಶೇಷವಾಗಿ ಆಚರಣೆ ಮಾಡಲಾಗುತ್ತಿತ್ತು. ಅದಕ್ಕಾಗಿ ಪಾಲಿಕೆಯಲ್ಲಿ ಅನುದಾನವನ್ನೂ ನಿಗದಿಪಡಿಸಲಾಗಿತ್ತು.
ಆದರೆ ಇದೀಗ ಆಡಳಿತದಲ್ಲಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ. ದಲಿತ ಸಮುದಾಯದ ಏಳಿಗೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಶ್ರೇಷ್ಠ ವ್ಯಕ್ತಿಯ ಜನ್ಮದಿನವನ್ನು ಆಚರಿಸದ ಸರ್ಕಾರದ ನಡೆಗೆ ದಲಿತ ಬಂಧುಗಳು ಬೇಸರ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಅವಧಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಸುಮಾರು ಮೂರುವರೆ ಕೋಟಿ ವೆಚ್ಚದಲ್ಲಿ ಪೂಜ್ಯರ ಸಮಾಧಿಯ ಉನ್ನತೀಕರಣಕ್ಕೆ ಶಿಲನ್ಯಾಸವನ್ನು ನೆರವೇರಿಸಲಾಗಿತ್ತು. ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಅದಕ್ಕೂ ತಡೆ ನೀಡಿರುವುದು ದುರಂತ ಎಂದರು.

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರಾದ ವಾದಿರಾಜ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಕುದ್ಮುಲ್ ರಂಗರಾವ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಬಿ.ಆರ್ ಹೃದಯನಾಥ್, ಉಪಾಧ್ಯಕ್ಷರಾದ ಶಾಮ ಕರ್ಕೇರ, ಪ್ರಧಾನ ಕಾರ್ಯದರ್ಶಿ ರಘುವೀರ್ ಬಾಬುಗುಡ್ಡ, ಉಪನ್ಯಾಸಕರಾದ ಪುಟ್ಟಸ್ವಾಮಿ, ಬಿಜೆಪಿ ಪ್ರಮುಖರಾದ ಮಾಜಿ ಮೇಯರ್ ಮನೋಜ್ ಕುಮಾರ್, ಭರತ್ ಕುಮಾರ್, ಮೋಹನ್ ಪೂಜಾರಿ, ಅಶ್ವಿತ್ ಕೊಟ್ಟಾರಿ, ಸೇರಿದಂತೆ ಟ್ರಸ್ಟ್ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು