ಇತ್ತೀಚಿನ ಸುದ್ದಿ
ಚಳ್ಳಕೆರೆ: ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಕೆ. ಟಿ. ಕುಮಾರಸ್ವಾಮಿಗೆ ಅಭಿನಂದನೆ, ಮಂಡಲ ಅಧ್ಯಕ್ಷರ ಪದಗ್ರಹಣ
30/06/2025, 12:00

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com
ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ವತಿಯಿಂದ ಪಕ್ಷದ ನೂತನ ಜಿಲ್ಲಾಧ್ಯಕ್ಷರಾದ ಕೆ. ಟಿ. ಕುಮಾರಸ್ವಾಮಿ ಅವರಿಗೆ ಅಭಿನಂದನೆ ಹಾಗೂ ಮಂಡಲ ಅಧ್ಯಕ್ಷ ಬಿ.ಎಂ. ಸುರೇಶ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಚಳ್ಳಕೆರೆ ಪಟ್ಟಣದ ಶ್ರೀ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಸಮಾರಂಭದಲ್ಲಿ ಚಿತ್ರದುರ್ಗ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ತಿಪ್ಪಾ ರೆಡ್ಡಿ, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಎ. ಮುರಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೆಕಾಯಿ ರಾಮದಾಸ್ ಮತ್ತು ಕಾಲವೇ ಹಳ್ಳಿ ಜಯಪಾಲಯ್ಯ, ಹಣಮಂತೆಗೌಡ, ಸುರನಹಳ್ಳಿ , ಶ್ರೀನಿವಾಸ್ ಹಾಗೂ ನಿವೃತ್ತಿ ತಹಶೀಲ್ದಾರ್ ರಘುಮೂರ್ತಿ ಹಾಗೂ ಪಕ್ಷದ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.