ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಕುಡಿತದ ಮತ್ತಿನಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ; ಇಬ್ಬರಿಗೆ ತೀವ್ರ ಗಾಯ
30/06/2025, 12:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದ ಘಟನೆ ಚಿಕ್ಕಮಗಳೂರು ನಗರದ ಟೌನ್ ಕ್ಯಾಂಟೀನ್ ಸರ್ಕಲ್ ನಲ್ಲಿ ನಡೆದಿದೆ.
ಹೊಡೆದಾಟದಲ್ಲಿ ಇಬ್ಬರು ಯುವಕರ ಗಂಭೀರ ಗಾಯಗೊಂಡು ಹಾಸನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಜಯ್ (23) ಹಾಗೂ ಯತೀಶ್ (23) ಎಂಬವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಅಜಯ್ ತಲೆಗೆ 7-8 ಕಡೆ ಒದೆ ಬಿದ್ದಿದ್ದು ಅಜಯ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಯತೀಶ್ ಎಡಗೈಗೆ ಗಂಭೀರ ಗಾಯವಾಗಿದ್ದು, ನರಗಳು ಕಟ್ ಆಗಿವೆ. ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.