9:54 PM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

Chikkamagaluru | ಭಾರೀ ಮಳೆ, ಮಂಜು: ಎತ್ತಿನ ಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್; 1 ತಿಂಗಳು ನಿರ್ಬಂಧ

01/07/2025, 11:27

ಚಿಕ್ಕಮಗಳೂರು(reporterkarnataka.com): ನಿರಂತರ ಮಳೆ, ಭಾರೀ ಮಂಜು ಕವಿಯುತ್ತಿರೋ ಕಾರಣದಿಂದ ಎತ್ತಿನ ಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್ ಕಲಾಗಿದೆ.


ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜ ಪ್ರವಾಸಿ ತಾಣವಾಗಿದೆ. ಪ್ರವಾಸಿಗರ ಹಿತದೃಷ್ಟಿಯಿಂದ ಚಾರಣಕ್ಕೆ ಅರಣ್ಯ ಇಲಾಖೆ ಬ್ರೇಕ್ ಹಾಕಿದೆ. 7 ಕಿ.ಮೀ. ಚಾರಣ ಹೋಗಿ ಎತ್ತಿನಭುಜದ ಸೌಂದರ್ಯವನ್ನು ಪ್ರವಾಸಿಗರು ಸವಿಯುತ್ತಿದ್ದರು. ಚಾರಣ ಮಾಡುವ ವೇಳೆ ಅನಾಹುತವಾದ್ರೆ ರಕ್ಷಣೆ ಮಾಡೋದು ಭಾರೀ ಕಷ್ಟಸಾಧ್ಯವಾಗಿದೆ. ಯಾವುದೇ ವಾಹನಗಳು ಹೋಗಲು ಆಗುವುದಿಲ್ಲ. ಹೊತ್ತೇ ತರಬೇಕಾದ ಪರಿಸ್ಥಿತಿ ಇದೆ.
ಕಾಡುಪ್ರಾಣಿಗಳ ಕಾಟ, ಮಳೆ, ಜಾರುವ ಪ್ರದೇಶದವಾದ್ದರಿಂದ ಚಾರಣಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಇಂದಿನಿಂದ ಒಂದು ತಿಂಗಳ ಕಾಲ ಸಂಪೂರ್ಣ ಬಂದ್ ಆಗಲಿದೆ.
ಎತ್ತಿನಭುಜದಲ್ಲಿ ಓರ್ವ ಕಾವಲುಗಾರನ ನೇಮಿಸಲು ಸೂಚಿಸಲಾಗಿದೆ. ಚಾರಣವನ್ನ ಬಂದ್ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು