4:04 PM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಕರ್ನಾಟಕ- ಕೇರಳ ರಾಜ್ಯ ಹೆದ್ದಾರಿ 36: ಗುಂಡಿಗಳದ್ದೇ ದರ್ಬಾರ್!; ಒಂದು ತಾಸಿನ ಪ್ರಯಾಣಕ್ಕೆ ಬೇಕು 2 ಗಂಟೆ!!

01/07/2025, 11:32

ಗಿರಿಧರ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕರ್ನಾಟಕ ಮತ್ತು ಕೇರಳ ನಡುವೆ ಸಂಪರ್ಕ ಕಲ್ಪಿಸುವ ಮಾಕುಟ್ಟ(ಕರ್ನಾಟಕ )-ಕಣ್ಣೂರು (ಕೇರಳ ) ನಡುವಿನ SH-36 ಸಾಕ್ಷಾತ್ ನರಕದ ದರ್ಶನ ತೋರುತ್ತಿದೆ, ಪೆರಂಬಾಡಿ ಯಿಂದ ಮಾಕುಟ್ಟ ತೆರಳುವ ಕಡಿದಾದ ದಾರಿಯಲ್ಲಿ ರಸ್ತೆಯನ್ನು ಹುಡುಕಿಕೊಂಡು ವಾಹನಗಳು ಸಂಚಾರ ಮಾಡುವ ಅನಿವಾರ್ಯತೆ ಉಂಟಾಗಿದೆ.
ಕೊಡಗು ಜಿಲ್ಲೆಗೆ ಕಣ್ಣೂರು ಎರ್ಪೋರ್ಟ್ ಸಮೀಪದಲ್ಲೇ ಇದ್ದರೂ ಇಲ್ಲಿಗೆ ತೆರಳುವುದಕ್ಕೆ ಒಂದು ಗಂಟೆ ಸಂಚಾರಕ್ಕೆ, ಹೆಚ್ಚುವರಿ1 ಗಂಟೆ ಅಧಿಕ ತಗಲುತ್ತಿದೆ, ಇನ್ನೂ ಅಪಘಾತ, ಜೋರು ಮಳೆ ಇದ್ದಾರಂತೂ ಒಮ್ಮೆ ಗಡಿ ದಾಟಿದರೆ ಸಾಕು ಎನ್ನುವಷ್ಟರ ಮಟ್ಟಿಗೆ ಹರಸಾಹಸ ಪಡಬೇಕಾದ ಅನಿವಾರ್ಯ ಇದೆ. ದಿನನಿತ್ಯ ಕೇರಳ ದಿಂದ ಆಗಮಿಸುವ ಪ್ರವಾಸಿಗರು, ಸರಕು, ಹಣ್ಣು ತರಕಾರಿ ಸಾಗಿಸುವ ವಾಹನಗಳು ಅಂತೂ ಹಿಡಿಶಾಪ ಹಾಕ್ಕೊಂಡೆ ಸಂಚಾರಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು