1:42 AM Tuesday1 - September 2026
ಬ್ರೇಕಿಂಗ್ ನ್ಯೂಸ್
ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ

01/07/2025, 20:07

ಬೆಂಗಳೂರು(reporterkarnataka.com): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಆಡಳಿತ ನ್ಯಾಯ ಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ರದ್ದು ಮಾಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿ ‘ವಾರ್ತಾ ಸೌಧ’ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

*ಅವಕಾಶ ದೊರೆತಿದ್ದರಿಂದ ಮುಖ್ಯಮಂತ್ರಿಯಾದೆ:ಸಿಎಂ*
ಶಾಸಕ ಬಿ.ಆರ್.ಪಾಟೀಲ್ ರವರು ಸಿದ್ದರಾಮಯ್ಯರವರು ಅದೃಷ್ಟದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಅವರ ಹೇಳಿಕೆ ಬಗ್ಗೆ ಮಾಹಿತಿಯಿಲ್ಲ. ಬಿ.ಆರ್.ಪಾಟೀಲ್ ಹಾಗೂ ನಾನು ಒಟ್ಟಿಗೆ ಶಾಸಕರಾಗಿದ್ದರಿಂದ ಹಾಗೂ ನನಗೆ ಮುಖ್ಯಮಂತ್ರಿಯಾಗಲು ಅವಕಾಶ ದೊರೆತಿದ್ದರಿಂದ, ಬಿ.ಆರ್.ಪಾಟೀಲ್ ರವರು ಈ ರೀತಿ ಹೇಳಿಕೆ ನೀಡಿರಬಹುದು. ಎಂದರು.

*ಜಾತಿಗಣತಿ ವಿವರವನ್ನು ಆನ್ ಲೈನ್ ನಲ್ಲಿಯೂ ಸಲ್ಲಿಸುವ ವ್ಯವಸ್ಥೆಯಿದೆ:*
ಜಾತಿಗಣತಿ ನಡೆಸಲಾಗಿದೆ ಎಂಬ ಪೋಸ್ಟರ್ ಗಳನ್ನು ಮನೆಗಳಿಗೆ ಭೇಟಿ ನೀಡದೇ, ಮನೆಯ ಮುಂದೆ ಅಂಟಿಸುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಜಾತಿಗಣತಿಯನ್ನು ನಡೆಸಲು ಹಲವು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆನ್ ಲೈನ್ ಮೂಲಕವೂ ಜಾತಿವಿವರಗಳನ್ನು ನೀಡಬಹುದು ಅಥವಾ ಮನೆಗಳಿಗೆ ಭೇಟಿ ನೀಡಿ ವಿವರಗಳನ್ನು ಪಡೆಯಬಹುದು. ಈ ಬಗ್ಗೆ ಸತ್ಯಾಸತ್ಯತೆ ತಿಳಿದು ಮಾಧ್ಯಮದವರು ಪ್ರಶ್ನಿಸಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು