11:31 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳಿಗೆ ಜುಲೈ 8ರಿಂದ 120 ದಿನಗಳವರೆಗೂ ನೀರು: ಸಚಿವ ಆರ್.ಬಿ. ತಿಮ್ಮಾಪೂರ

02/07/2025, 10:43

ಬೆಂಗಳೂರು(reporterkarnataka.com): ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ 80.58 ಟಿಎಂಸಿ ನೀರು ಸಂಗ್ರಹವಾಗಿದ್ದು, ಜುಲೈ 8ರಿಂದ ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್. ಬಿ. ತಿಮ್ಮಾಪೂರ ಅವರು ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಸಚಿವ ಆರ್ ಬಿ ತಿಮ್ಮಾಪೂರ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ 2025-26 ನೇ ಸಾಲಿನ ಮುಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲಾಯಿತು.


ಆಲಮಟ್ಟಿ ಮತ್ತು ನಾರಾಯಣಪುರ ಡ್ಯಾಂಗಳಲ್ಲಿ 80.58 ನೀರು ಸಂಗ್ರಹವಾಗಿದ್ದು, ಕಳೆದ ಸಾಲಿಗಿಂತ 54.77 ಟಿಎಂಸಿ ಹೆಚ್ಚುವರಿ ನೀರು ಸಂಗ್ರಹವಾಗಿದೆ. ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶವು ಮುಂಗಾರು ಹಂಗಾಮಿನ ಮಳೆ ಆಧರಿತವಾಗಿದ್ದು, ಮಳೆಯನ್ನು ಆಧರಿಸಿ ಅವಶ್ಯಕತೆಗೆ ತಕ್ಕಂತೆ ನೀರು ಹರಿಸಲು ಸಚಿವರು ಸೂಚಿಸಿದರು.
ಜುಲೈ 8ರಿಂದ ಮುಂದಿನ 120 ದಿನಗಳಿಗೆ‌ ಮುಂಗಾರು ಹಂಗಾಮಿಗೆ ನೀರು ಪೂರೈಸಲು ತೀರ್ಮಾನಿಸಲಾಗಿದೆ. ಒಳಹರಿವು ಆಧರಿಸಿ ಕಾಲುವೆಗಳಿಗೆ ಸತತವಾಗಿ ನೀರು ಬಿಡಲು ಸಚಿವ ತಿಮ್ಮಾಪೂರ ಅವರು ಅಧಿಕಾರಿಗಳಿಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು