3:54 AM Tuesday1 - September 2026
ಬ್ರೇಕಿಂಗ್ ನ್ಯೂಸ್
ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ

02/07/2025, 19:48

ಬೆಂಗಳೂರು(reporterkarnataka.com): ರಾಜ್ಯ ಕಾಂಗ್ರೆಸ್ ಸರ್ಕಾರ ಅತೀವ ಭ್ರಷ್ಟಾಚಾರದ ಮುಳುಗಿದ್ದು, ವಿಧಾನಸಭೆ ಕ್ಷೇತ್ರಗಳ ಅಭಿವೃದ್ಧಿಗೆ ಬಿಡಿಗಾಸು ಕೊಡಲು ಹಣವಿಲ್ಲದ ದುಸ್ಥಿತಿಯಲ್ಲಿ ಇದೆ ಎಂದು ಜೆಡಿಎಸ್ ಆರೋಪಿಸಿದೆ.


ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಂಗಳವಾರ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಕಾರ್ಯಕರ್ತರು, ಮುಖಂಡರು ಭಾಗವಹಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡ ಅವರು; ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಹೇಳಿದರು.
ರಾಜ್ಯ ಸರ್ಕಾರದ ಆಡಳಿತದಲ್ಲಿನ ಭ್ರಷ್ಟಾಚಾರ, ಲಂಚಗುಳಿತನ ಹಾಗೂ ಆಡಳಿತ ವೈಫಲ್ಯದಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ದಿವಾಳಿಯಾಗಿದೆ ಎಂದು ಬೇಸರಗೊಂಡು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರುಗಳೇ ಟೀಕಾ ಪ್ರಹಾರ ಮಾಡುತ್ತಿದ್ದು, ಇದೇ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಪಾಲರ ಗಮನ ಸೆಳೆಯಲಾಗುವುದು ಎಂದು ಅವರು ಹೇಳಿದರು.
ರಾಜ್ಯದಲ್ಲಿ ಆರ್ಥಿಕ ಅರಾಜಕತೆ ಸೃಷ್ಟಿಯಾಗಿದೆ ಎಂದು ಗಂಭೀರ ಆರೋಪ ಮಾಡಿದ ಅವರು; ಅನುದಾನವಿಲ್ಲದೆ ಶಾಸಕರು ಕ್ಷೇತ್ರಗಳ ಅಭಿವೃದ್ಧಿ ಮಾಡಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ. ಈ ಕಾರಣಕ್ಕೆ ಶಾಸಕರು ಬಂಡಾಯ ಎದ್ದಿದ್ದು, ಇದು ಸರ್ಕಾರದ ಅಧಃಪತನಕ್ಕೆ ಕಾರಣವಾಗಲಿದೆ. ಕಾಂಗ್ರೆಸ್ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದೆ ಎಂದು ಅವರು ಆರೋಪಿಸಿದರು.
ಈ ಪ್ರತಿಭಟನೆಯಲ್ಲಿ ಶಾಸಕ ಟಿ.ಎನ್. ಜವರಾಯಿಗೌಡ ರವರು, ಮಾಜಿ ಶಾಸಕ ಕೆ.ಎ.ತಿಪ್ಪೇಸ್ವಾಮಿ, ಪಕ್ಷದ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ಶೈಲಾ ಸಂತೋಜಿ ರಾವ್, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಫ್ರೋಜ್ ಬೇಗ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಧ್ಯಕ್ಷ ಟಿ.ಆರ್. ತುಳಸಿರಾಮ್, ಉತ್ತರ ಲೋಕಸಭೆ ಕ್ಷೇತ್ರದ ಅಧ್ಯಕ್ಷ ಎ.ಎಂ.ಪ್ರವೀಣ್ ಕುಮಾರ್, ಕೇಂದ್ರ ಲೋಕಸಭೆ ಕ್ಷೇತ್ರದ ಅಧ್ಯಕ್ಷ ನಾಗೇಶ್ವರ ರಾವ್, ಬೆಂಗಳೂರು ನಗರ ಕಾರ್ಯಧ್ಯಕ್ಷ ಕೆ.ವಿ. ನಾರಾಯಣಸ್ವಾಮಿ, ಮಹಾಪ್ರಧಾನ ಕಾರ್ಯದರ್ಶಿ ಎಸ್.ರಮೇಶ, ಚನ್ನೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ತಾರಾ ಲೋಕೇಶ್ ಹಾಗೂ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಪಕ್ಷದ ಅಧ್ಯಕ್ಷರು, ವಿವಿಧ ವಿಭಾಗಗಳ ಅಧ್ಯಕ್ಷರು ಸೇರಿದಂತೆ ಅನೇಕ ಮುಖಂಡರುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು