4:05 PM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಧರೆಗೆ ಉರುಳಿದ 200 ವರ್ಷಗಳ ಇತಿಹಾಸವಿರುವ ಔದುಂಬರ ವೃಕ್ಷ: ಮಡಿಕೇರಿಯ ಮ್ಯಾನ್ ಕಾಂಪೌಂಡ್ ನಲ್ಲಿದ್ದ ಮರ

02/07/2025, 20:34

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗನ್ನು ಆಳಿದ ರಾಜರ ಕಾಲದಲ್ಲಿ ಆನೆಗಳನ್ನು ಕಟ್ಟಿ ಹಾಕುತ್ತಿದ್ದ ಬೃಹತ್ ಗಾತ್ರದ ಮರಗಳಲ್ಲಿ ಒಂದು ಮರ ಇದುವರೆಗೂ ಬದುಕಿ ಎಲ್ಲರಿಗೂ ಆಶ್ರಯ ನೀಡಿತ್ತು. ಆದರೆ ಇಂದು ಇನ್ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿದ್ದ ಮಡಿಕೇರಿಯ ಮ್ಯಾನ್ ಕಾಂಪೌಂಡ್ ಆವರಣದಲ್ಲಿರುವ ಔದುಂಬರ ವೃಕ್ಷ (ಅತ್ತಿ ಹಣ್ಣಿನ ಮರ.. fig) ಮರದ ಅರ್ಧಭಾಗ ಧರೆಗೆ ಉರುಳುವ ದೃಶ್ಯವನ್ನು ಮರದ ಸಮೀಪವೇ ಇರುವ ಅಂಗಡಿಯ ಮಾಲೀಕ ಪಿ.ಎಂ ರವಿ ಸೆರೆ ಹಿಡಿದಿದ್ದಾರೆ.



ಮೈದಾನದಲ್ಲಿ ಆಟವಾಡಿ ದಣಿದವರಿಗೆ ಆಶ್ರಯ ನೀಡುತ್ತಿದ್ದ ಈ ಮರ ಅದರಲ್ಲಿರುವ ಸಕಾರಾತ್ಮಕ ಶಕ್ತಿಯನ್ನು ಎಲ್ಲರಿಗೂ ಪಸರಿಸಿದೆ. ಹಾಗೆ ಈ ಮರದ ಸುತ್ತ ಕಟ್ಟೆಯನ್ನು ಕಟ್ಟಿ ಹಬ್ಬ ಹರಿ ದಿನಗಳಲ್ಲಿ ಇದರ ಸುತ್ತ ಕೊಡವರ ಸಾಂಪ್ರದಾಯಿಕ ನೃತ್ಯಗಳು, ಇದೆ ಕೋಲ್ ಮಂದ್ ನಲ್ಲಿ ನಡೆಯುತ್ತಿತ್ತು. ಸಣ್ಣ ಮಕ್ಕಳಿಂದ ಹಿಡಿದು ದೊಡ್ಡವರಿಗೆ ನೆರಳಿನ ಆಶ್ರಯ ನೀಡುತ್ತಿದ್ದ ಈ ಮರದ ಅರ್ಧ ಭಾಗ ಇಂದು ಮಧ್ಯಾಹ್ನ 3:30ರ ವೇಳೆಗೆ ಧರೆಗೆ ಉರುಳಿದ್ದು, ಉಳಿದ ಭಾಗ ಬೀಳುವ ಹಂತದಲ್ಲಿ ನೆಲೆ ನಿಂತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು