9:59 PM Wednesday2 - July 2025
ಬ್ರೇಕಿಂಗ್ ನ್ಯೂಸ್
Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ…

ಇತ್ತೀಚಿನ ಸುದ್ದಿ

ಧರೆಗೆ ಉರುಳಿದ 200 ವರ್ಷಗಳ ಇತಿಹಾಸವಿರುವ ಔದುಂಬರ ವೃಕ್ಷ: ಮಡಿಕೇರಿಯ ಮ್ಯಾನ್ ಕಾಂಪೌಂಡ್ ನಲ್ಲಿದ್ದ ಮರ

02/07/2025, 20:34

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗನ್ನು ಆಳಿದ ರಾಜರ ಕಾಲದಲ್ಲಿ ಆನೆಗಳನ್ನು ಕಟ್ಟಿ ಹಾಕುತ್ತಿದ್ದ ಬೃಹತ್ ಗಾತ್ರದ ಮರಗಳಲ್ಲಿ ಒಂದು ಮರ ಇದುವರೆಗೂ ಬದುಕಿ ಎಲ್ಲರಿಗೂ ಆಶ್ರಯ ನೀಡಿತ್ತು. ಆದರೆ ಇಂದು ಇನ್ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿದ್ದ ಮಡಿಕೇರಿಯ ಮ್ಯಾನ್ ಕಾಂಪೌಂಡ್ ಆವರಣದಲ್ಲಿರುವ ಔದುಂಬರ ವೃಕ್ಷ (ಅತ್ತಿ ಹಣ್ಣಿನ ಮರ.. fig) ಮರದ ಅರ್ಧಭಾಗ ಧರೆಗೆ ಉರುಳುವ ದೃಶ್ಯವನ್ನು ಮರದ ಸಮೀಪವೇ ಇರುವ ಅಂಗಡಿಯ ಮಾಲೀಕ ಪಿ.ಎಂ ರವಿ ಸೆರೆ ಹಿಡಿದಿದ್ದಾರೆ.



ಮೈದಾನದಲ್ಲಿ ಆಟವಾಡಿ ದಣಿದವರಿಗೆ ಆಶ್ರಯ ನೀಡುತ್ತಿದ್ದ ಈ ಮರ ಅದರಲ್ಲಿರುವ ಸಕಾರಾತ್ಮಕ ಶಕ್ತಿಯನ್ನು ಎಲ್ಲರಿಗೂ ಪಸರಿಸಿದೆ. ಹಾಗೆ ಈ ಮರದ ಸುತ್ತ ಕಟ್ಟೆಯನ್ನು ಕಟ್ಟಿ ಹಬ್ಬ ಹರಿ ದಿನಗಳಲ್ಲಿ ಇದರ ಸುತ್ತ ಕೊಡವರ ಸಾಂಪ್ರದಾಯಿಕ ನೃತ್ಯಗಳು, ಇದೆ ಕೋಲ್ ಮಂದ್ ನಲ್ಲಿ ನಡೆಯುತ್ತಿತ್ತು. ಸಣ್ಣ ಮಕ್ಕಳಿಂದ ಹಿಡಿದು ದೊಡ್ಡವರಿಗೆ ನೆರಳಿನ ಆಶ್ರಯ ನೀಡುತ್ತಿದ್ದ ಈ ಮರದ ಅರ್ಧ ಭಾಗ ಇಂದು ಮಧ್ಯಾಹ್ನ 3:30ರ ವೇಳೆಗೆ ಧರೆಗೆ ಉರುಳಿದ್ದು, ಉಳಿದ ಭಾಗ ಬೀಳುವ ಹಂತದಲ್ಲಿ ನೆಲೆ ನಿಂತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು