8:56 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಧರೆಗೆ ಉರುಳಿದ 200 ವರ್ಷಗಳ ಇತಿಹಾಸವಿರುವ ಔದುಂಬರ ವೃಕ್ಷ: ಮಡಿಕೇರಿಯ ಮ್ಯಾನ್ ಕಾಂಪೌಂಡ್ ನಲ್ಲಿದ್ದ ಮರ

02/07/2025, 20:34

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗನ್ನು ಆಳಿದ ರಾಜರ ಕಾಲದಲ್ಲಿ ಆನೆಗಳನ್ನು ಕಟ್ಟಿ ಹಾಕುತ್ತಿದ್ದ ಬೃಹತ್ ಗಾತ್ರದ ಮರಗಳಲ್ಲಿ ಒಂದು ಮರ ಇದುವರೆಗೂ ಬದುಕಿ ಎಲ್ಲರಿಗೂ ಆಶ್ರಯ ನೀಡಿತ್ತು. ಆದರೆ ಇಂದು ಇನ್ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿದ್ದ ಮಡಿಕೇರಿಯ ಮ್ಯಾನ್ ಕಾಂಪೌಂಡ್ ಆವರಣದಲ್ಲಿರುವ ಔದುಂಬರ ವೃಕ್ಷ (ಅತ್ತಿ ಹಣ್ಣಿನ ಮರ.. fig) ಮರದ ಅರ್ಧಭಾಗ ಧರೆಗೆ ಉರುಳುವ ದೃಶ್ಯವನ್ನು ಮರದ ಸಮೀಪವೇ ಇರುವ ಅಂಗಡಿಯ ಮಾಲೀಕ ಪಿ.ಎಂ ರವಿ ಸೆರೆ ಹಿಡಿದಿದ್ದಾರೆ.



ಮೈದಾನದಲ್ಲಿ ಆಟವಾಡಿ ದಣಿದವರಿಗೆ ಆಶ್ರಯ ನೀಡುತ್ತಿದ್ದ ಈ ಮರ ಅದರಲ್ಲಿರುವ ಸಕಾರಾತ್ಮಕ ಶಕ್ತಿಯನ್ನು ಎಲ್ಲರಿಗೂ ಪಸರಿಸಿದೆ. ಹಾಗೆ ಈ ಮರದ ಸುತ್ತ ಕಟ್ಟೆಯನ್ನು ಕಟ್ಟಿ ಹಬ್ಬ ಹರಿ ದಿನಗಳಲ್ಲಿ ಇದರ ಸುತ್ತ ಕೊಡವರ ಸಾಂಪ್ರದಾಯಿಕ ನೃತ್ಯಗಳು, ಇದೆ ಕೋಲ್ ಮಂದ್ ನಲ್ಲಿ ನಡೆಯುತ್ತಿತ್ತು. ಸಣ್ಣ ಮಕ್ಕಳಿಂದ ಹಿಡಿದು ದೊಡ್ಡವರಿಗೆ ನೆರಳಿನ ಆಶ್ರಯ ನೀಡುತ್ತಿದ್ದ ಈ ಮರದ ಅರ್ಧ ಭಾಗ ಇಂದು ಮಧ್ಯಾಹ್ನ 3:30ರ ವೇಳೆಗೆ ಧರೆಗೆ ಉರುಳಿದ್ದು, ಉಳಿದ ಭಾಗ ಬೀಳುವ ಹಂತದಲ್ಲಿ ನೆಲೆ ನಿಂತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು