2:38 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು…

ಇತ್ತೀಚಿನ ಸುದ್ದಿ

ಖಾಸಗಿ ಶಾಲಾ ವಾಹನ ಚಾಲಕರ ದರ್ಬಾರ್: ಅತೀ ವೇಗ ಪ್ರಶ್ನಿಸಿದರೆ ಗಲಾಟೆಗೆ ಬರುವ ಚಾಲಕರು!

02/07/2025, 23:17

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಖಾಸಗಿ ಶಾಲಾ ವಾಹನಗಳು ಅತ್ಯಂತ ವೇಗವಾಗಿ ಚಲಾಯಿಸುತ್ತಿದ್ದು ಅದನ್ನು ಪ್ರೆಶ್ನೆ ಮಾಡಿದ ಸಾರ್ವಜನಿಕರ ವಿರುದ್ಧ ಗಲಾಟೆ ಮಾಡಲು ಚಾಲಕರು ಬರುತ್ತಾರೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಂದು ಅರಣ್ಯ ಇಲಾಖೆ ಸಮೀಪ ಖಾಸಗಿ ಶಾಲೆಯ ವಾಹನ ಚಾಲಕ ರಸ್ತೆಯ ಪಕ್ಕದಲ್ಲಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿ ಹಾಗೂ ಮಹಿಳೆಯೊಬ್ಬರಿಗೆ ತಾಗಿಸಿದ್ದಾನೆ. ನೋಡಿಕೊಂಡು ಹೋಗಬೇಕು. ಇದು ಶಾಲೆ ಆಗಿರುವುದರಿಂದ ಮಕ್ಕಳು ಓಡಾಡುತ್ತಿರುತ್ತಾರೆ. ಸ್ವಲ್ಪ ನಿಧಾನವಾಗಿ ಹೋಗಿ ಎಂದು ಹೇಳಿದ್ದಕ್ಕೆ ಅಲ್ಲಿದ್ದ ಜನರ ವಿರುದ್ಧ ಚಾಲಕ ಗಲಾಟೆ ಮಾಡಿದ್ದಾನೆ ಎಂದು ಅಲ್ಲಿದ್ದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಖಾಸಗಿ ಶಾಲಾ ವಾಹನಗಳು ಅತ್ಯಂತ ವೇಗವಾಗಿ ಹೋಗುತ್ತವೆ ಎಂಬುದಾಗಿ ವರದಿ ಕೂಡ ಮಾಡಿತ್ತು. ಆದರೆ ಈ ಬಗ್ಗೆ ಶಾಲಾ ಆಡಳಿತ ಮಂಡಳಿ ಹಾಗೂ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಂತೆ ಕಾಣಿಸುತ್ತಿಲ್ಲ. ಮಳೆಗಾಲದಲ್ಲಿ ಅತ್ಯಂತ ವೇಗವಾಗಿ ಹೋಗುವಾಗ ಗಾಡಿ ಸ್ಕಿಡ್ ಆಗುವ ಸಾಧ್ಯತೆ ಇರುತ್ತದೆ. ವಾಹನದಲ್ಲಿ ಮಕ್ಕಳು ಇರುತ್ತಾರೆ ಎಂಬುದನ್ನು ಚಾಲಕರು ಮರೆತಂತೆ ಕಾಣಿಸುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು