11:19 PM Sunday28 - June 2026
ಬ್ರೇಕಿಂಗ್ ನ್ಯೂಸ್
ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ…

ಇತ್ತೀಚಿನ ಸುದ್ದಿ

ಖಾಸಗಿ ಶಾಲಾ ವಾಹನ ಚಾಲಕರ ದರ್ಬಾರ್: ಅತೀ ವೇಗ ಪ್ರಶ್ನಿಸಿದರೆ ಗಲಾಟೆಗೆ ಬರುವ ಚಾಲಕರು!

02/07/2025, 23:17

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಖಾಸಗಿ ಶಾಲಾ ವಾಹನಗಳು ಅತ್ಯಂತ ವೇಗವಾಗಿ ಚಲಾಯಿಸುತ್ತಿದ್ದು ಅದನ್ನು ಪ್ರೆಶ್ನೆ ಮಾಡಿದ ಸಾರ್ವಜನಿಕರ ವಿರುದ್ಧ ಗಲಾಟೆ ಮಾಡಲು ಚಾಲಕರು ಬರುತ್ತಾರೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಂದು ಅರಣ್ಯ ಇಲಾಖೆ ಸಮೀಪ ಖಾಸಗಿ ಶಾಲೆಯ ವಾಹನ ಚಾಲಕ ರಸ್ತೆಯ ಪಕ್ಕದಲ್ಲಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿ ಹಾಗೂ ಮಹಿಳೆಯೊಬ್ಬರಿಗೆ ತಾಗಿಸಿದ್ದಾನೆ. ನೋಡಿಕೊಂಡು ಹೋಗಬೇಕು. ಇದು ಶಾಲೆ ಆಗಿರುವುದರಿಂದ ಮಕ್ಕಳು ಓಡಾಡುತ್ತಿರುತ್ತಾರೆ. ಸ್ವಲ್ಪ ನಿಧಾನವಾಗಿ ಹೋಗಿ ಎಂದು ಹೇಳಿದ್ದಕ್ಕೆ ಅಲ್ಲಿದ್ದ ಜನರ ವಿರುದ್ಧ ಚಾಲಕ ಗಲಾಟೆ ಮಾಡಿದ್ದಾನೆ ಎಂದು ಅಲ್ಲಿದ್ದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಖಾಸಗಿ ಶಾಲಾ ವಾಹನಗಳು ಅತ್ಯಂತ ವೇಗವಾಗಿ ಹೋಗುತ್ತವೆ ಎಂಬುದಾಗಿ ವರದಿ ಕೂಡ ಮಾಡಿತ್ತು. ಆದರೆ ಈ ಬಗ್ಗೆ ಶಾಲಾ ಆಡಳಿತ ಮಂಡಳಿ ಹಾಗೂ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಂತೆ ಕಾಣಿಸುತ್ತಿಲ್ಲ. ಮಳೆಗಾಲದಲ್ಲಿ ಅತ್ಯಂತ ವೇಗವಾಗಿ ಹೋಗುವಾಗ ಗಾಡಿ ಸ್ಕಿಡ್ ಆಗುವ ಸಾಧ್ಯತೆ ಇರುತ್ತದೆ. ವಾಹನದಲ್ಲಿ ಮಕ್ಕಳು ಇರುತ್ತಾರೆ ಎಂಬುದನ್ನು ಚಾಲಕರು ಮರೆತಂತೆ ಕಾಣಿಸುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು