5:03 AM Wednesday16 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ದ. ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಪ್ರಾಧಿಕಾರಗಳ ಒಕ್ಕೂಟದಿಂದ ಸಚಿವ ಭೈರತಿ ಸುರೇಶ್ ಭೇಟಿ

02/07/2025, 23:23

ಬೆಂಗಳೂರು(reporterkarnataka.com): ದ. ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ಯೋಜನಾ ಪ್ರಾಧಿಕಾರಗಳ ಒಕ್ಕೂಟದ ವತಿಯಿಂದ ಇಂದು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಮತ್ತು ನಗರಯೋಜನೆ ಸಚಿವ ಭೈರತಿ ಸುರೇಶ್, ವಿಧಾನ ಪರಿಷತ್ ಶಾಸಕರಾದ ಐವನ್ ಡಿ ‘ ಸೋಜಾ, ಕೆಪಿಸಿಸಿ ಕಾರ್ಯಧ್ಯಕ್ಷ ಮತ್ತು ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿ, ಮಾಜಿ ಸಚಿವರುಗಳಾದ ಶ್ರೀ ಬಿ. ರಮಾನಾಥ ರೈ ಶ್ರೀ ವಿನಯಕುಮಾರ್ ಸೊರಕೆ, ಕರ್ನಾಟಕ ನಗರ ಮತ್ತು ಗ್ರಾಮಾoತರ ಯೋಜನಾ ಇಲಾಖೆಯ ಆಯುಕ್ತ ವೆಂಕಟಾಚಾಲಪತಿ ಐ. ಎ. ಎಸ್ ಮೊದಲಾದ ವರನ್ನು ಭೇಟಿ ಮಾಡಿ ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕ ವಲಯ ನಿಯಮಾವಳಿ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 9/11 ವಿನ್ಯಾಸ ಅನುಮೋದನೆ, ಕನ್ವರ್ಷನ್, ಕಟ್ಟಡ ನಿರ್ಮಾಣ ಪರವಾನಿಗೆ ಮೊದಲಾದ ನಿಯಮಗಳಲ್ಲಿ ಸರಳೀಕರಣ ಮಾಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ, ಒಕ್ಕೂಟದ ಸಂಚಾಲಕ ದಿನಕರ್ ಹೆರೂರ್, ಒಕ್ಕೂಟದ ಸಂಚಾಲಕ, ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ. ಎಂ. ಮುಸ್ತಫ ಸುಳ್ಯ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯರು ಗಳಾದ ಅಬ್ದುಲ್ ಜಲೀಲ್ ನೀರಜ್ ಪಾಲ್, ಮೂಡಬಿದ್ರಿ ಪ್ರಾಧಿಕಾರ ಸದಸ್ಯ ಸತೀಶ್. ಕೆ. ಉಡುಪಿ ಪ್ರಾಧಿಕಾರ ಸದಸ್ಯ ಗಿರೀಶ್ ಕುಂದರ್, ಉಡುಪಿ ಭೂ ನ್ಯಾಯ ಮಂಡಳಿ ಸದಸ್ಯರೋಯ್ಸ್ ಉದ್ಯಾವರ, ಕಾಂಗ್ರೆಸ್ ಮುಖಂಡರಾದ ತಾಯಿನಾತ್ ಬೊಳoಜ ಮೊದಲಾದವರು ನಿಯೋಗದಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು