6:46 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

Madikeri | ಕೊಡಗಿನಲ್ಲಿ ಬಾಂಗ್ಲಾ ನುಸುಳುಕೋರರ ಆತಂಕ: ಕಾರ್ಮಿಕರ ಮೇಲೆ ನಿಗಾ ವಹಿಸಲು ಎಸ್ಪಿ ಸೂಚನೆ

03/07/2025, 12:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಳೆದ ಹಲವು ತಿಂಗಳಿನಿಂದ ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಅಸ್ಸಾಂ ಮೂಲದ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದ್ದು, ಈ ಪೈಕಿ ಕೆಲವು ಬಾಂಗ್ಲಾ ನುಸುಳುಕೋರರು ಇದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ.
ಹೌದು. ಕೊಡಗು ಜಿಲ್ಲೆಯ ಮಡಿಕೇರಿ, ಸುಂಟಿಕೊಪ್ಪ, ಕುಶಾಲನಗರ, ವಿರಾಜಪೇಟೆ, ಗೋಣಿಕೊಪ್ಪಲು, ನಾಪೋಕ್ಲು ಸೇರಿದಂತೆ ಕೊಡಗಿನ ಪ್ರಮುಖ ಪಟ್ಟಣಗಳಲ್ಲಿ ನಡೆಯುವ ವಾರದ ಸಂತೆಗಳಲ್ಲಿ ಹೊಸ ಮುಖಗಳೇ ಹೆಚ್ಚಾಗಿ ಕಂಡುಬರುತ್ತಿವೆ. ಸಂತೆಗಳಲ್ಲಿ ವ್ಯಾಪಾರ ಮಾಡುವುದರಿಂದ ಆರಂಭಿಸಿ ಹೋಂ ಸ್ಟೇ, ರೆಸಾರ್ಟ್ ಗಳಲ್ಲಿ ರೂಮ್ ಬಾಯ್ ತನಕವೂ ಹೊರ ರಾಜ್ಯದ ಕಾರ್ಮಿಕರೇ ಹೆಚ್ಚಾಗಿ ಕಂಡು ಬರುತ್ತಿದ್ದಾರೆ. ಇತ್ತೀಚೆಗೆ ಕೆಲವು ಅಪರಾಧ ಪ್ರಕರಣಗಳಲ್ಲೂ ಹೊರ ರಾಜ್ಯದವರೇ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ನಿಗಾ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಕೊಡಗಿಗೆ ಬರುವ ವಲಸೆ ಕಾರ್ಮಿಕರು ಜಿಲ್ಲಾದ್ಯಂತ ಚದುರಿ ಹೋಗುತ್ತಿದ್ದಾರೆ. ಇದರಿಂದ ಅಕ್ರಮ ವಲಸಿಗರನ್ನು ಪತ್ತೆ ಮಾಡುವುದು ಕಷ್ಟವಾಗುತ್ತಿದೆ. ಹೀಗಾಗಿ ಕೆಲಸ ನೀಡುವ ಕಾಫಿ ತೋಟದ ಮಾಲೀಕರು, ಕಾರ್ಮಿಕರನ್ನು ಕರೆ ತರುವ ದಲ್ಲಾಳಿಗಳು ಆಯಾ ಕಾರ್ಮಿಕರ ಪೂರ್ವಾಪರ ವಿಚಾರಿಸಿ ಬಳಿಕ ಕೆಲಸಕ್ಕೆ ನೇಮಿಸಿಕೊಳ್ಳುವಂತೆ ಎಚ್ಚರಿಸಿದ್ದಾರೆ.
ಒಂದು ವೇಳೆ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡುವಂತೆ ಕೊಡಗು ಪೊಲೀಸ್ ಅಧೀಕ್ಷಕರಾದ ರಾಮರಾಜನ್ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು