12:34 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಅಕ್ಟೋಬರ್‌, ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

03/07/2025, 12:42

ಬೆಂಗಳೂರು(reporterkarnataka.com):ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಖಚಿತವಾಗಿ ಸಿಎಂ ಬದಲಾವಣೆಯಾಗಲಿದೆ. ಕಾಂಗ್ರೆಸ್‌ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲರೂ ಸಿಎಂ ಆಗಲು ಮುಂದಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಖಚಿತವಾಗಿ ಸಿಎಂ ಬದಲಾವಣೆಯಾಗಲಿದೆ. ಕಾಂಗ್ರೆಸ್‌ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲ ಶಾಸಕರು ಮುಖ್ಯಮಂತ್ರಿಯಾಗಲು ಹೊರಟಿದ್ದಾರೆ. ಸಿದ್ದರಾಮಯ್ಯನವರು ಸಿಎಂ ಆಗಿಯೇ ಇರುತ್ತಾರೆಂದು ಪಕ್ಷದ ವರಿಷ್ಠರು ಹೇಳಬೇಕು. ಆದರೆ ಭಯದಿಂದ ಸ್ವತಃ ಸಿದ್ದರಾಮಯ್ಯನವರೇ ಅದನ್ನು ಪದೇ ಪದೇ ಹೇಳುತ್ತಿದ್ದಾರೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎನ್ನುವ ಡಿ.ಕೆ.ಶಿವಕುಮಾರ್‌ ಅವರೇ ಈ ರೀತಿಯ ಸಂದೇಶ ನೀಡುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಅಭಿವೃದ್ಧಿ ಶೂನ್ಯವಾಗಿ ಶಾಸಕರು ಬೇಸರಗೊಂಡಿದ್ದಾರೆ. ಜನರಿಗೆ ವಿಶ್ವಾಸ ಹೊರಟುಹೋಗಿದೆ ಎಂದರು.
2028 ರವರೆಗೆ ಸಿದ್ದರಾಮಯ್ಯನವರೇ ಸಿಎಂ ಎಂದು ಡಿ.ಕೆ.ಶಿವಕುಮಾರ್‌ ಹೇಳಲಿ. ಅದನ್ನು ಆರನೇ ಗ್ಯಾರಂಟಿ ಎಂದು ಅಂದುಕೊಂಡು ಸುಮ್ಮನಾಗುತ್ತೇವೆ ಎಂದರು.
ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್‌ ಸಿಂಗ್‌ ಹೆಸರು ಸೂಕ್ತವಲ್ಲ. ಜಿಲ್ಲೆಗಳ ಹೆಸರನ್ನು ಬದಲಿಸಿದಂತೆಯೇ ಏಕಾಏಕಿ ಹೆಸರು ಬದಲಿಸುತ್ತಿದ್ದಾರೆ. ಪೂರ್ವಿಕರು ಇಟ್ಟ ಹೆಸರನ್ನು ಹೀಗೆ ಬದಲಿಸಬಾರದು. ಬೆಂಗಳೂರನ್ನು ಈಗಾಗಲೇ ಒಡೆದುಹಾಕಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರನ್ನು ಒಂದಾಗಿಸಲಿದೆ. ಬೆಂಗಳೂರು ಅಭಿವೃದ್ಧಿ ಮಾಡುವುದು ಬಿಟ್ಟು, ನಾಮಫಲಕ ಬದಲಿಸುವುದರಿಂದ ಕೋಟ್ಯಂತರ ರೂಪಾಯಿ ವ್ಯರ್ಥವಾಗಲಿದೆ. ದಕ್ಷಿಣ, ಉತ್ತರ ಎಂದು ಹೆಸರು ನೀಡುವುದರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.
ಜಾತಿ ಗಣತಿ ವರದಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಮುಖಭಂಗವಾಗಿದೆ. ಕೇಂದ್ರ ಸರ್ಕಾರ ಮಾಡುವಾಗ ಇವರು ಮತ್ತೆ ಗಣತಿ ಮಾಡಿದರೆ ಅದಕ್ಕೆ ಕಿಮ್ಮತ್ತಿನ ಬೆಲೆ ಇಲ್ಲ. ಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಅವರು ನುಡಿದರು.

*ಬಿಜೆಪಿ ಹೋರಾಟಕ್ಕೆ ಜಯ:* ವಾಲ್ಮೀಕಿ ನಿಗಮದ ಹಗರಣವನ್ನು ಸಿಬಿಐಗೆ ನೀಡಿರುವುದರಿಂದ ಬಿಜೆಪಿಯ ಹೋರಾಟಕ್ಕೆ ಜಯ ಸಿಕ್ಕಿದೆ. ಕೋರ್ಟ್‌ ನಮಗೆ ನಿಜವಾದ ನ್ಯಾಯ ನೀಡಿದೆ ಎಂದರು.
ಆರ್‌ಎಸ್‌ಎಸ್‌ ನಿಷೇಧ ಮಾಡಿದರೆ, ಮತ್ತೆ ಸಂಘಟನೆ ಪುಟಿದೇಳುತ್ತದೆ. ನಾನು, ಪ್ರಧಾನಿ ನರೇಂದ್ರ ಮೋದಿ, ಅನೇಕ ರಾಜ್ಯಗಳ ರಾಜ್ಯಪಾಲರು, ಹಲವಾರು ಸಂಸದರು, ಶಾಸಕರು ಆರ್‌ಎಸ್‌ಎಸ್‌ನಲ್ಲಿದ್ದಾರೆ. ಸಂಘಟನೆಯಲ್ಲಿ ಶಿಸ್ತನ್ನು ಕಲಿಸಲಾಗುತ್ತದೆ. ಆರ್‌ಎಸ್‌ಎಸ್‌ ಬಗ್ಗೆ ತಿಳಿದು ಮಾತನಾಡಬೇಕು. ಅದು ದೇಶಭಕ್ತ ಸಂಘಟನೆಯಾಗಿದ್ದು, ಅದರ ಬಗ್ಗೆ ಮಾತನಾಡುವಾಗ ಸ್ವಲ್ಪ ಅರಿವು ಇರಬೇಕು. ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ ಜಾತ್ಯತೀತ, ಸಮಾಜವಾದ ಪದ ಇಲ್ಲ. ಈ ಬಗ್ಗೆ ಕಾಂಗ್ರೆಸ್‌ ನಾಯಕರು ಉತ್ತರಿಸಲಿ. ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಬೇಕಿದೆ. ಇವೆರಡೂ ಪದಗಳು ಸಂವಿಧಾನದ ಪುಸ್ತಕಕ್ಕೆ ಸೇರ್ಪಡೆಯಾಗುವಾಗ ಕೂಡ ಸಂಸತ್ತಿನಲ್ಲಿ ಚರ್ಚೆಯಾಗಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು