4:35 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಬೆಂಗಳೂರು: ಜು. 7ರಂದು ವಿವಿಧ ಬೇಡಿಕೆಗಳ ಅಗ್ರಹಿಸಿ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಅಧಿಕಾರಿ, ನೌಕರರ ಬೃಹತ್ ಪ್ರತಿಭಟನೆ

03/07/2025, 16:08

ತುಮಕೂರು(reporterkarnataka.com): ವಿವಿಧ ಬೇಡಿಕೆಗಳ ಅಗ್ರಹಿಸಿ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಅಧಿಕಾರಿ, ನೌಕರರು ಸಾಮೂಹಿಕ ರಜೆ ಹಾಕಿ ಜುಲೈ 7ರಂದು ಬೆಂಗಳೂರಿನ ಫ್ರಿಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ತುಮಕೂರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು (ರಿ)ತುಮಕೂರು ಜಿಲ್ಲಾ ಘಟಕದ ವತಿಯಿಂದ ಮಾಧ್ಯಮಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷ ಎ.ಅಮೃತ್ ರಾಜ್ ಈ ವಿಷಯ ತಿಳಿಸಿದರು.
ರಾಜ್ಯದ ಮಹಾನಗರ ಪಾಲಿಕೆಯ 10 ಮಹಾನಗರ ಪಾಲಿಕೆಯ ಅಧಿಕಾರಿ/ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಹಲವಾರು ಬಾರಿ ಮನವಿ ಪತ್ರಗಳನ್ನು ನಗರಾಭಿವೃದ್ಧಿ ಸಚಿವರು/ ಕಾರ್ಯದರ್ಶಿಗಳು ನಗರಾಭಿವೃದ್ಧಿ ಇಲಾಖೆ ರವರಿಗೆ ನೀಡಿದರು ಸಹ ಯಾವುದೇ ಸಕರಾತ್ಮಕವಾಗಿ ಸ್ವಂದಿಸದೆ ಇರುವುದರಿಂದ ಜುಲೈ 7ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಎಲ್ಲಾ ಮಹಾನಗರ ಪಾಲಿಕೆಯ ಅಧಿಕಾರಿ ನೌಕರರು ಸಾಮೂಹಿಕ ರಜೆ ಹಾಕಿ ಕೆಲಸ ಕಾರ್ಯಗಳನ್ನು ಸ್ಥಗಿತ ಮಾಡಿ ಬೃಹತ್ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ನುಡಿದರು.
7ನೇ ವೇತನ ಆಯೋಗದ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರಿಗೆ ವಿಸ್ತರಿಸಿರುವಂತೆ ಮಹಾನಗರ ಪಾಲಿಕೆ ಅಧಿಕಾರಿ ನೌಕರರಿಗೆ ಯಥಾವತ್ತಾಗಿ ಸರ್ಕಾರ ಆರ್ಥಿಕ ಇಲಾಖೆಯಿಂದಲೇ ಅನುದಾನವನ್ನು ಬಿಡುಗಡೆ ಮಾಡಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿಸೂಚನೆಯನ್ನು ಪ್ರಕಟಿಸಬೇಕು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ ಕೆ.ಜಿ.ಐ.ಡಿ ಮತ್ತು ಜಿ.ಪಿ.ಎಫ್ ಸೌಲಭ್ಯವನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಜಾರಿಗೊಳಿಸಬೇಕು.
ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಆರೋಗ್ಯ ಸೌಲಭ್ಯದ ಜ್ಯೋತಿ/ ಆರೋಗ್ಯ ಸಂಜೀವಿನಿಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಜಾರಿಗೊಳಿಸಬೇಕು.
ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ವರ್ಷ ಆಯೋಜಿಸುವ ಕ್ರೀಡೆಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಆಯೋಜಿಸಬೇಕು.

ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರು ಸುಮಾರು ವರ್ಷಗಳಿಂದ ವಿವಿಧ ವೃಂದದ ಹುದ್ದೆಗಳನ್ನು ಮುಂಬಡ್ತಿ ಪಡೆಯಲು ವಂಚಿತರಾಗಿರುವುದರಿಂದ ಕೂಡಲೇ ವೃಂದವಾರು ಮುಂಬಡ್ತಿ ನೀಡಬೇಕು ಎಂದು ಬೃಹತ್ ಪ್ರತಿಭಟನೆಯನ್ನು ಜುಲೈ 7ರಂದು ಸ್ವಾತಂತ್ರ್ಯ ಉದ್ಯಾನವನ(ಫೀಡಂ ಪಾರ್ಕ್)ನಲ್ಲಿ ರಾಜ್ಯದ 10 ಮಹಾನಗರ ಪಾಲಿಕೆ ಸಾವಿರಾರು ಅಧಿಕಾರಿ, ನೌಕರರು ಭಾಗವಹಿಸಲಿದ್ದಾರೆ.
ಗೌರವಾಧ್ಯಕ್ಷರಾದ ಎಸ್.ಎಚ್.ಗುರುಮೂರ್ತಿ, ರಾಜ್ಯ ಉಪಾಧ್ಯಕ್ಷರುಗಳಾದ ಜಿ.ವೆಂಕಟ್ ರಾಮ್, ವೇಣುಗೋಪಾಲ್ ಬಿ.ಎನ್. ಮತ್ತು ಪ್ರಧಾನ ಕಾರ್ಯದರ್ಶಿ ಟಿ.ಸಿ.ಬಸವರಾಜಯ್ಯ, ಖಜಾಂಚಿ ರುದ್ರೇಶ್ ಬಿ ಹಾಗೂ ರಾಜ್ಯ ಕಾರ್ಯದರ್ಶಿ ಪ್ರಹ್ಲಾದ್ ಕುಲಕರ್ಣಿ, ರಾಜ್ಯ ನಿರ್ದೇಶಕರುಗಳಾದ ಸಾಯಿಶಂಕರ್, ಜಗದೀಶ್ ಎಸ್, ಎ.ಜಿ.ಬಾಬು, ಶ್ರೀನಿವಾಸ್ ಕಟ್ಟಿ, ಬಾಬು ಪಿ, ನರಸಿಂಹ ಕೆ, ಶಾಂತಪ್ಪ ಮುಖೇಶಪ್ಪ ಪತ್ತಾರ, ರವೀಂದ್ರ ಶಿರಶ್ಯಾದ ಮತ್ತು 10 ಮಹಾನಗರ ಪಾಲಿಕೆ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರುಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು