12:18 AM Saturday22 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಸುಳ್ಯದ ಜನತೆಗೆ ಚಿನ್ನಾಭರಣಗಳ ಆಯ್ಕೆಗೆ ಹೊಸದೊಂದು ಮಳಿಗೆ ‘ಸ್ವರ್ಣಂ ಜುವೆಲ್ಸ್’: ಜು.7ರಂದು ಶುಭಾರಂಭ

03/07/2025, 16:33

ಸುಳ್ಯ(reporterkarnataka.com): ಸುಳ್ಯದ ಜನತೆಗೆ, ಆಭರಣ ಪ್ರಿಯರಿಗೆ ಚಿನ್ನಾಭರಣಗಳ ವೈವಿಧ್ಯಮಯ ಆಯ್ಕೆಗಾಗಿ ಹೊಸದೊಂದು ಮಳಿಗೆ ‘ಸ್ವರ್ಣಂ ಜುವೆಲ್ಸ್‌’ ಶೀಘ್ರದಲ್ಲೇ ಶುಭಾರಂಭಗೊಳ್ಳಲಿದೆ.
ಗ್ರಾಹಕರ ಸೇವೆಯಲ್ಲಿ, ಚಿನ್ನೋದ್ಯಮದಲ್ಲಿ 20ಕ್ಕೂ ಹೆಚ್ಚು ವರ್ಷಗಳ ಅನುಭವ ಹೊಂದಿರುವವರ ಪಾಲುದಾರಿಕೆಯೊಂದಿಗೆ ಕಾರ್ಯಾರಂಭ ಮಾಡಲಿರುವ ಸ್ವರ್ಣಂ ಜುವೆಲ್ಸ್‌, ಜುಲೈ 7ರಂದು ಸೋಮವಾರ ಸುಳ್ಯದ ಕೆ.ಎಸ್‌.ಆರ್.ಟಿ.ಸಿ ಬಸ್‌ ನಿಲ್ದಾಣದ ಎದುರು ಸುಂತೋಡು ಎಂಪೋರಿಯಂ ನಲ್ಲಿ ಉದ್ಘಾಟನೆಗೊಳ್ಳಲಿದೆ.
ಗ್ರಾಹಕರಿಗೆ ಸಾಕಷ್ಟು ಪಾರ್ಕಿಂಗ್ ಅವಕಾಶವೂ ಲಭ್ಯವಿದೆ. ವಿಶೇಷ ಪಾರ್ಕಿಂಗ್‌ಗಾಗಿ ಕರೆಮಾಡಿ- 7975425067.

ಸುಂದರ ಸುಳ್ಯಕ್ಕೆ ಸ್ವರ್ಣಂ ಸ್ಪರ್ಶ ಎಂಬ ಘೋಷವಾಕ್ಯದೊಂದಿಗೆ ಕಾರ್ಯಾರಂಭ ಮಾಡಲಿರುವ ನೂತನ ಮಳಿಗೆಯಲ್ಲಿ ಪ್ರತೀ ಖರೀದಿಗೆ ಖಚಿತ ಉಡುಗೊರೆಗಳೂ ಲಭ್ಯವಿವೆ.
ಪ್ರವೀಣ್ ಬಿ ಗೌಡ, ಭವಿತ್ ಯು ಹಾಗೂ ಲೋಕೇಶ್ ಎಂ.ಎಸ್‌, ಸಂಜೀವ ಕೆ. ಅವರು ಸ್ವರ್ಣಂ ಜುವೆಲ್ಸ್‌ನ ಆಡಳಿತ ಪಾಲುದಾರರಾಗಿದ್ದಾರೆ.
ದೀಪೋಜ್ವಲನ ಕಾರ್ಯಕ್ರಮದಲ್ಲಿ ಮುಳಿಯ ಗೋಲ್ಡ್ & ಡೈಮಂಡ್ಸ್‌ನ ಮಾಲೀಕರಾದ ಶ್ರೀಮತಿ ಮತ್ತು ಕೇಶವ ಪ್ರಸಾದ್ ಮುಳಿಯ, ಶ್ರೀಮತಿ ಮತ್ತು ಶ್ರೀ ಕೃಷ್ಣನಾರಾಯಣ ಮುಳಿಯ ಹಾಗೂ ಕುಂಭಕೋಡಿ ಶ್ರೀಮತಿ ಶಶಿಕಲಾ ಶುಭಕರ್ ರಾವ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಪ್ರಧಾನ ಕಾರ್ಯದರ್ಶಿ ಡಾ.ಅಕ್ಷಯ್ ಕೆ.ಸಿ ಅವರು ಡೈಮಂಡ್‌ ಕೌಂಟರ್ ಅನ್ನು ಉದ್ಘಾಟಿಸಲಿದ್ದಾರೆ. ಸುಂತೋಡು ಎಂಪೋರಿಯಂ ಮಾಲಕ ಸೂರಯ್ಯ ಗೌಡ ಅವರು ಚಿನ್ನಾಭರಣ ಕೌಂಟರ್ ಉದ್ಘಾಟಿಸಲಿದ್ದಾರೆ. ಶ್ರೀಮತಿ ಶ್ರಮಿಕಾ ಸುಂತೋಡು ರವರು ಸ್ವರ್ಣಂ ಸ್ಪೆಷಲ್ ಆಭರಣಗಳನ್ನು ಬಿಡುಗಡೆ ಮಾಡಲಿದ್ದಾರೆ.

*ನಾವು ತುರ್ತು ಸಮಯದಲ್ಲಿ ಗ್ರಾಹಕರ ಮನಸಿಗೊಪ್ಪುವ ಚಿನ್ನಾಭರಣಗಳನ್ನು ವಿಶೇಷವಾದ ವಿನ್ಯಾಸಗಳೊಂದಿಗೆ ತಯಾರಿಸಿಕೊಡುತ್ತೇವೆ. ಗ್ರಾಹಕರು ಮಳಿಗೆಗೆ ಭೇಟಿ ನೀಡಿ ನಮ್ಮಲ್ಲಿರುವ ವ್ಯಾಪಕ ಶ್ರೇಣಿಯ ಆಭರಣಗಳ ಸಂಗ್ರಹವನ್ನು ವೀಕ್ಷಿಸಬೇಕಾಗಿ ಕೋರುತ್ತೇವೆ.*

*- ಆಡಳಿತ ಪಾಲುದಾರರು, ಸ್ವರ್ಣಂ ಜ್ಯುವೆಲ್ಸ್, ಸುಳ್ಯ*

ಇತ್ತೀಚಿನ ಸುದ್ದಿ

ಜಾಹೀರಾತು