4:20 PM Friday4 - July 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಕಲಬುರಗಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ, ಭದ್ರತೆಗೆ ಪ್ರವಾಸಿ ಮಿತ್ರ: ತರಬೇತಿ ಪಡೆದ ಗೃಹರಕ್ಷಕ ತಂಡ

04/07/2025, 12:55

ಕಲಬುರಗಿ(reporterkarnataka.com): ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ, ಭದ್ರತೆ ಹಾಗೂ ಪ್ರವಾಸಿ ತಾಣಗಳ ಸಂರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 2015ನೇ ಸಾಲಿನಲ್ಲಿ ತರಬೇತಿ ಪಡೆದ ಗೃಹರಕ್ಷಕ ಸಿಬ್ಬಂದಿಗಳನ್ನು ಜಿಲ್ಲೆಯ ಪ್ರವಾಸಿತಾಣಗಳಲ್ಲಿ ಪ್ರವಾಸಿ ಮಿತ್ರ ( ಟೂರಿಸ್ಟ್ ಪೊಲೀಸ) ಹೆಸರಿನಡಿ ಯೋಜನೆಯನ್ನು ಕಲಬುರಗಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದೆ.

ಕಲಬುರಗಿ ಜಿಲ್ಲೆಯ ಪ್ರವಾಸಿ ತಾಣಗಳಾದ ಶ್ರೀಶರಣಬಸವೇಶ್ವರ ದೇವಸ್ಥಾನ, ಬುದ್ದ ವಿಹಾರ, ಕಲಬುರಗಿ ಕೋಟೆ, ಪ್ರಾಣಿ ಸಂಗ್ರಹಾಲಯ, ಪ್ರಾಚ್ಯ ವಸ್ತು ಸಂಗ್ರಹಾಲಯ, ಘತ್ತರಗಿ ಭಾಗ್ಯವಂತಿ ದೇವಸ್ಥಾನ, ಗಾಣಗಾಪೂರ ದತ್ತ ದೇವಸ್ಥಾನ, ಲಾಡ್ಲೆ ಮಶಾಕ ದರ್ಗಾ, ಮಳಖೇಡ ಕೋಟೆ, ಚಂದ್ರಂಪಳ್ಳಿ ಜಲಾಶಯ ಹೀಗೆ ಪ್ರವಾಸೋದ್ಯಮ ಇಲಾಖೆಯಿಂದ ಗುರುತಿಸಲಾದ ಕಲಬುರಗಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ರವಾಸಿ ಮಿತ್ರ ಯೋಜನೆಯಡಿ ತರಬೇತಿ ಪಡೆದ ಜಿಲ್ಲೆಯ ಒಟ್ಟು 48 ಪ್ರವಾಸಿ ಮಿತ್ರ ಸಿಬ್ಬಂದಿಗಳನ್ನು ಹಂತ ಹಂತವಾಗಿ ದೇಶೀಯ ಹಾಗೂ ವಿದೇಶೀಯ ಪ್ರವಾಸಿಗರ ಸೂಕ್ತ ಭದ್ರತೆ ಹಾಗೂ ಅಗತ್ಯ ಮಾಹಿತಿಗಳ ಪೂರೈಕೆಗಾಗಿ ನಿಯೋಜಿಸಲಾಗಿದೆ.
2015ರಲ್ಲಿ ಪ್ರಾರಂಭವಾದ ಈ ಯೋಜನೆಯುಡಿ ಗೃಹ ರಕ್ಷಕದಳದ ಅರ್ಹ ಸಿಬ್ಬಂದಿಯನ್ನು ಈ ಯೋಜನೆಯಡಿ ಆಯ್ಕೆ ಮಾಡಿ ಒಂದು ತಿಂಗಳುಗಳ ಕಾಲ ಪ್ರವಾಸಿತಾಣಗಳ ಕುರಿತು, ಪ್ರವಾಸಿಗರೊಂದಿಗಿನ ಸೌಜನ್ಯ ದಿಂದ ವರ್ತಿಸುವದರಿಂದ ಹಿಡಿದು, ಪೊಲೀಸ ನಿಯಮಾವಳಿಗಳಾದಿಯಾಗಿ ವಿಶೇಷ ತರಬೇತಿ ನೀಡಲಾಗಿರುತ್ತದೆ.
ಪ್ರವಾಸಿ ಮಿತ್ರರಿಗೆ ವಿಶೇಷವಾದ ಸಮವಸ್ತ್ರವನ್ನು ಪ್ರವಾಸೋದ್ಯಮ ಇಲಾಖೆಯು ನಿಗದಿ ಪಡಿಸಿರುವದರಿಂದ ಇವರನ್ನು ಪ್ರವಾಸಿತಾಣಗಳಲ್ಲಿ ಗುರುತಿಸಲು ಸಹಕಾರಿಯಾಗಿದೆ,
ಇಂದು 40 ಪ್ರವಾಸಿ ಮಿತ್ರರಿಗೆ ಪ್ರವಾಸೋದ್ಯಮ ಇಲಾಖೆಯ ಅನುದಾನದಿಂದ ನೂತನ ಸಮವಸ್ತ್ರಗಳನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಇಂದು ಕಲಬುರಗಿ ಯಲ್ಲಿ ವಿತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು