11:42 PM Sunday28 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಭಾರತ್ ಕಿಶೋರ್ ಟೈಟಲ್ ವಿಜೇತ ದೇಹದಾರ್ಡ್ಯಪಟು ಜಲ್ಲಿಗುಡ್ಡೆಯ ಸಂತೋಷ್ ಕುಮಾರ್ ಉಳ್ಳಾಲ್ ಹೃದಯಾಘಾತಕ್ಕೆ ಬಲಿ

04/07/2025, 22:25

ಉಳ್ಳಾಲ(reporterkarnataka.com): ಭಾರತ್ ಕಿಶೋರ್ ಟೈಟಲ್ ವಿಜೇತ ದೇಹದಾರ್ಡ್ಯಪಟು ರೈಲ್ವೇ ಉದ್ಯೋಗಿ ಜಲ್ಲಿಗುಡ್ಡೆ ನಿವಾಸಿ ಸಂತೋಷ್ ಕುಮಾರ್ ಉಳ್ಳಾಲ್ (52) ಹುಬ್ಬಳ್ಳಿಯಲ್ಲಿ ಗುರುವಾರ ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮೂಲತಃ ಉಳ್ಳಾಲ ಉಳಿಯ ನಿವಾಸಿಯಾಗಿದ್ದ ಸಂತೋಷ್ ಕುಮಾರ್ ತೊಕ್ಕೊಟ್ಟಿನ ಶಕ್ತಿಭಾರತ್ ವ್ಯಾಯಾಮ ಶಾಲೆಯಲ್ಲಿ ತರಬೇತಿ ಪಡೆದು ರಾಜ್ಯ, ರಾಷ್ಟ್ರಮಟ್ಟದ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿದ್ದರು.
ಕರ್ನಾಟಕ ಉದಯ, ಭಾರತ್ ಕಿಶೋರ್ ಟೈಟಲ್ ವಿಜೇತರಾಗಿದ್ದರು. ರೈಲ್ವೇ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದ ಅವರು ದೇಹದಾರ್ಡ್ಯಪಟುವಾಗಿ ರೈಲ್ವೇಯನ್ನು ಪ್ರತಿನಿಧಿಸಿದ್ದರು. ಮಂಗಳೂರು ರೈಲ್ವೇ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು ಹುಬ್ಬಳ್ಳಿಯಲ್ಲಿ ಸಭೆಯಲ್ಲಿ ಭಾಗವಹಿಸಲು ತನ್ನ ಸಹೋದ್ಯೋಗಿಯೊಂದಿಗೆ ತೆರಳುತ್ತಿದ್ದಾಗ ಅವರು ಹೃದಯಾಘಾತದಿಂದ ನಿಧನ ಹೊಂದಿದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು