5:03 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

06/07/2025, 20:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ ಕಾಫಿನಾಡಿಗೆ ಭೇಟಿ ನೀಡದಂತೆ ಒಂದು ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ.
ಚಿಕ್ಕಮಗಳೂರು ಜಿಲ್ಲಾಡಳಿತ ಶರಣ್ ಪಂಪ್ ವೆಲ್ ಅವರಿಗೆ
6-7-25 ರಿಂದ 4-8-25ರ 30 ದಿನಗಳ ಕಾಲ ನಿರ್ಬಂಧ ಹೇರಿದೆ. ಶರಣ್ ಪಂಪ್ ವೆಲ್ ಮೇಲೆ 22ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಚಿಕ್ಕಮಗಳೂರು, ಮೂಡಿಗೆರೆ, ಆಲ್ದೂರಿನಲ್ಲಿ ಪಂಪ್ ವೆಲ್ ಕರೆಸಿ ಬೈಠಕ್ ಹಮ್ಮಿಕೊಳ್ಳಲಾಗಿದೆ. ಶರಣ್ ಪಂಪ್ ವೆಲ್ ಕೋಮುದ್ವೇಷ ಹರಡುವ ಭಾಷಣ ಮಾಡುವ ಪ್ರವೃತ್ತಿ ಉಳ್ಳವರಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಚಿಕ್ಕಮಗಳೂರು ಸೇರಿ ಕೆಲ ಪಟ್ಟಣಗಳು ಮತೀಯ ಸೂಕ್ಷ್ಮ ಪ್ರದೇಶವಾಗಿದೆ.
ಸಣ್ಣ ಘಟನೆಯೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಭಂಗ ತರುವ ಸಾಧ್ಯತೆಗಳಿವೆ.
ಹಾಗಾಗಿ, ಮುಂದಿನ 30 ದಿನಗಳ ಕಾಲ ಪಂಪ್ ವೆಲ್ ಗೆ ಚಿಕ್ಕಮಗಳೂರು ಜಿಲ್ಲೆಗೆ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು