8:18 PM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಬಣಕಲ್‌ ಬಸ್ ತಂಗುದಾಣಕ್ಕೆ ಶಾಸಕಿ ನಯನಾ ಮೋಟಮ್ಮ ಚಾಲನೆ: ದಶಕಗಳ ನಾಗರಿಕರ ಕನಸು ಕೊನೆಗೂ ನನಸು

07/07/2025, 20:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಣಕಲ್ ಗ್ರಾಮದಲ್ಲಿ ಬಹು ನಿರೀಕ್ಷಿತ ಬಸ್ ತಂಗುದಾಣಕ್ಕೆ ಕೊನೆಗೂ ಚಾಲನೆ ದೊರೆತಿದ್ದು, ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರು ಸೋಮವಾರ ಉದ್ಘಾಟನೆ ನೆರವೇರಿಸಿದರು.
ಇದರೊಂದಿಗೆ ದಶಕಗಳಿಂದ ರಸ್ತೆಬದಿಯಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು, ಕೆಲಸಗಾರರು ಹಾಗೂ ಪ್ರಯಾಣಿಕರಿಗೆ ನಿರಾಶ್ರಿತ ಸ್ಥಿತಿಗೆ ಅಂತ್ಯವಾಯಿತು. ಮಳೆಗಾಲದಲ್ಲಿ ಗಾಳಿ ಮತ್ತು ಮಳೆಯಿಂದ ರಕ್ಷಣೆಗಾಗಿ ಅಂಗಡಿಗಳ ಆಶ್ರಯ ಬೇಕಾಗುತ್ತಿದ್ದ ಸಂದರ್ಭಗಳಿಗೂ ತೆರೆಬಿದ್ದಂತಾಗಿದೆ.
ಶಾಸಕಿ ನಯನ ಮೋಟಮ್ಮ ಮಾತನಾಡಿ, “ಗ್ರಾಮದ ಜನತೆ ಹಲವು ವರ್ಷಗಳಿಂದ ತಂಗುದಾಣದ ಅಗತ್ಯವನ್ನು ಮುಂದಿಟ್ಟು ಬಂದಿದ್ದರು. ಈ ಸಂದರ್ಭದಲ್ಲಿ ತಂಗುದಾಣ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು,” ಎಂದು ತಿಳಿಸಿದರು. ಜೊತೆಗೆ ಸಾರ್ವಜನಿಕರು ಸ್ಥಳದ ಸ್ವಚ್ಛತೆ ಕಾಪಾಡುವ ಜವಾಬ್ದಾರಿಯನ್ನು ಹೊಣೆ ಹೊತ್ತುಕೊಳ್ಳಬೇಕೆಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಬಣಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಝರಿನ್, ಉಪಾಧ್ಯಕ್ಷೆ ಬಿ.ಬಿ. ಲೀಲಾವತಿ, ಪಿಡಿಓ ಕೃಷ್ಣಪ್ಪ, ಪಂಚಾಯಿತಿ ಸದಸ್ಯರಾದ.ಅತೀಕ ಬಾನು, ಇರ್ಫಾನ್, ಸಿರಾಜ್,ವಿನಯ್, ಮಧು ಕುಮಾರ್, ಸ್ಥಳೀಯರಾದ ದಿಲ್ದಾರ್ ಬೇಗಂ, ಕಾಂಗ್ರೆಸ್ ಹೋಬಳಿ ಅಧ್ಯಕ್ಷ ಸುಬ್ರಮಣ್ಯ, ಕುಂಜಿಮೋಣು, ಪೋಲ್ಸನ್, ಶಿವರಾಮ್ ಶೆಟ್ಟಿ, ಅಜೀದ್, ಸಿದ್ದೀಕ್,ಗೋಪಾಲ ಚಾರ್, ವಿಕ್ರಂ ಗೌಡ, ಸತೀಶ್ ಗೌಡ, ಮೆಲ್ವಿನ್,ಉಮ್ಮಾರ್, ಹೊಸಕೆರೆ ರಮೇಶ್,ಸಬ್ಲಿ ದೇವರಾಜ್,ದೇವಪ್ಪ ಜನಪ್ರತಿನಿಧಿಗಳು,ಊರಿನ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು