3:13 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಬಣಕಲ್‌ ಬಸ್ ತಂಗುದಾಣಕ್ಕೆ ಶಾಸಕಿ ನಯನಾ ಮೋಟಮ್ಮ ಚಾಲನೆ: ದಶಕಗಳ ನಾಗರಿಕರ ಕನಸು ಕೊನೆಗೂ ನನಸು

07/07/2025, 20:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಣಕಲ್ ಗ್ರಾಮದಲ್ಲಿ ಬಹು ನಿರೀಕ್ಷಿತ ಬಸ್ ತಂಗುದಾಣಕ್ಕೆ ಕೊನೆಗೂ ಚಾಲನೆ ದೊರೆತಿದ್ದು, ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರು ಸೋಮವಾರ ಉದ್ಘಾಟನೆ ನೆರವೇರಿಸಿದರು.
ಇದರೊಂದಿಗೆ ದಶಕಗಳಿಂದ ರಸ್ತೆಬದಿಯಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು, ಕೆಲಸಗಾರರು ಹಾಗೂ ಪ್ರಯಾಣಿಕರಿಗೆ ನಿರಾಶ್ರಿತ ಸ್ಥಿತಿಗೆ ಅಂತ್ಯವಾಯಿತು. ಮಳೆಗಾಲದಲ್ಲಿ ಗಾಳಿ ಮತ್ತು ಮಳೆಯಿಂದ ರಕ್ಷಣೆಗಾಗಿ ಅಂಗಡಿಗಳ ಆಶ್ರಯ ಬೇಕಾಗುತ್ತಿದ್ದ ಸಂದರ್ಭಗಳಿಗೂ ತೆರೆಬಿದ್ದಂತಾಗಿದೆ.
ಶಾಸಕಿ ನಯನ ಮೋಟಮ್ಮ ಮಾತನಾಡಿ, “ಗ್ರಾಮದ ಜನತೆ ಹಲವು ವರ್ಷಗಳಿಂದ ತಂಗುದಾಣದ ಅಗತ್ಯವನ್ನು ಮುಂದಿಟ್ಟು ಬಂದಿದ್ದರು. ಈ ಸಂದರ್ಭದಲ್ಲಿ ತಂಗುದಾಣ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು,” ಎಂದು ತಿಳಿಸಿದರು. ಜೊತೆಗೆ ಸಾರ್ವಜನಿಕರು ಸ್ಥಳದ ಸ್ವಚ್ಛತೆ ಕಾಪಾಡುವ ಜವಾಬ್ದಾರಿಯನ್ನು ಹೊಣೆ ಹೊತ್ತುಕೊಳ್ಳಬೇಕೆಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಬಣಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಝರಿನ್, ಉಪಾಧ್ಯಕ್ಷೆ ಬಿ.ಬಿ. ಲೀಲಾವತಿ, ಪಿಡಿಓ ಕೃಷ್ಣಪ್ಪ, ಪಂಚಾಯಿತಿ ಸದಸ್ಯರಾದ.ಅತೀಕ ಬಾನು, ಇರ್ಫಾನ್, ಸಿರಾಜ್,ವಿನಯ್, ಮಧು ಕುಮಾರ್, ಸ್ಥಳೀಯರಾದ ದಿಲ್ದಾರ್ ಬೇಗಂ, ಕಾಂಗ್ರೆಸ್ ಹೋಬಳಿ ಅಧ್ಯಕ್ಷ ಸುಬ್ರಮಣ್ಯ, ಕುಂಜಿಮೋಣು, ಪೋಲ್ಸನ್, ಶಿವರಾಮ್ ಶೆಟ್ಟಿ, ಅಜೀದ್, ಸಿದ್ದೀಕ್,ಗೋಪಾಲ ಚಾರ್, ವಿಕ್ರಂ ಗೌಡ, ಸತೀಶ್ ಗೌಡ, ಮೆಲ್ವಿನ್,ಉಮ್ಮಾರ್, ಹೊಸಕೆರೆ ರಮೇಶ್,ಸಬ್ಲಿ ದೇವರಾಜ್,ದೇವಪ್ಪ ಜನಪ್ರತಿನಿಧಿಗಳು,ಊರಿನ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು