9:42 AM Sunday28 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ ಕೆಲಸಕ್ಕೆ ಸಾರ್ವಜನಿಕರ ಹಿಡಿ ಶಾಪ!

08/07/2025, 13:02

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ತೀರ್ಥಹಳ್ಳಿ- ಕೊಪ್ಪ ರಸ್ತೆ ಸಂಪರ್ಕಿಸುವ ತುಂಗಾ ಕಮಾನು ಸೇತುವೆ ಮೇಲೆ ಮಳೆ ಬರುವ ವೇಳೆ ಎರಡು ಅಡಿ ನೀರು ಹರಿಯುತ್ತಿದ್ದು ಇದರಿಂದ ಸೇತುವೆ ಮೇಲೆ ಓಡಾಟ ಮಾಡುವವರಿಗೆ ಮಳೆಯ ಸ್ನಾನದ ಜೊತೆಗೆ ಕೊಳಚೆ ನೀರಿನ ಸ್ನಾನ ಕೂಡ ಆಗುತ್ತಿದೆ.

ಪ್ರವಾಸಿ ಮಂದಿರದಿಂದ ಹರಿದು ಬರುವ ನೀರು ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಇಲ್ಲಿ ಸಣ್ಣ ಮಳೆ ಬಂದರೂ ನೀರು ರಸ್ತೆಯ ಮೇಲೆ ಹರಿದು ಪ್ರಯಾಣಿಕರಿಗೆ ಮತ್ತು ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದೆ. ತ್ಯಾಜ್ಯ, ಕೊಳಕು ನೀರು ರಸ್ತೆಯ
ಮೇಲೆ ಹರಿಯುತ್ತಿದ್ದು, ನಡೆದಾಡಲು ಕಷ್ಟಪಡುವಂತಾಗಿದೆ. ಇಲ್ಲಿ ಪಾದಚಾರಿಗಳಿಗೆ ವಾಹನಗಳಿಂದ ಕೊಳಕು ನೀರಿನ ಅಭಿಷೇಕ ಮಾಮೂಲಿ ಎಂಬಂತೆ ಆಗಿದೆ.
ತತ್‌ಕ್ಷಣ ಇಲ್ಲಿ ಚರಂಡಿ ವ್ಯವಸ್ಥೆಯನ್ನು ಸರಿಪಡಿಸಿ ರಸ್ತೆಯಿಂದ ಹರಿದು ಬರುವ ನೀರು ಸೇತುವೆ ಮೇಲೆ ನಿಲ್ಲದಂತೆ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು