1:42 PM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಮುಂದುವರೆದ ಆನೆ -ಮಾನವ ಸಂಘರ್ಷ: ಒಂದು ಬಲಿ; ಮತ್ತೊಬ್ಬನ ಮೇಲೂ ದಾಳಿ

08/07/2025, 13:05

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದಕ್ಷಿಣ ಕೊಡಗಿನಲ್ಲಿ ಸೈಕ್ಲಿಂಗ್ ಮಾಡುತ್ತಿದ್ದ ವ್ಯಕ್ತಿ ಒಬ್ಬನ ಮೇಲೆ ಆನೆ ದಾಳಿ ನಡೆಸಿ ಸೈಕಲ್ ಸಂಪೂರ್ಣ ನಜ್ಜುಗುಜ್ಜು ಆಗಿ ಸವಾರ ಪರಾಗಿರುವ ಬೆನ್ನಲ್ಲೇ ಅದೇ ಮಾರ್ಗದಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ಕೊಡಗಿನ ಪೊನ್ನoಪೇಟೆ ತಾಲ್ಲೂಕಿನ ಬಾಳೆಲೆ ಸಮೀಪ ಪೊನ್ನಪ್ಪಸಂತೆ ರಸ್ತೆಯಲ್ಲಿ ಬೆಳಗಿನ ಜಾವ 7:00 ಸುಮಾರಿಗೆ ಕೋಣನ ಕಟ್ಟೆಯ ನಿವಾಸಿ ಹಾಗೂ ಬಾಳಲಿಯಲ್ಲಿ ಜೆರಾಕ್ಸ್ ಅಂಗಡಿಯ ಮಾಲೀಕ ಅಜಯ್ ಎಂಬುವನು ಬೆಳಿಗ್ಗೆ ಸೈಕ್ಲಿಂಗ್ ಮಾಡುತ್ತಿರುವಾಗ ಆನೆ ದಾಳಿ ನಡೆಸಿದೆ.
ಅಜಯ್ ಪ್ರಾಣಪಾಯದಿಂದ ಪಾರಾಗಿದ್ದು ಸೈಕಲ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ, ಅದೇ ಮಾರ್ಗದಲ್ಲಿ ತೆರಳುತ್ತಿದ್ದ ವ್ಯಕ್ತಿ ಮೇಲೆ ದಾಳಿ ನಡೆಸಿ ಆತನನ್ನು ಬಲಿ ಪಡೆದುಕೊಂಡಿದೆ. ಸ್ಥಳಕ್ಕೆ ಅರಣ್ಯಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಸ್ಥಳೀಯರು ನಿರಂತರ ಆನೆ ಹಾವಳಿ ವಿರುದ್ದ ಆಕ್ರೋಶಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು