4:08 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

ಅಗ್ನಿವೀರ್ ವಾಯು ಪಡೆ ಪ್ರವೇಶ ಆಯ್ಕೆ ಪರೀಕ್ಷೆ: ಅರ್ಜಿ ಆಹ್ವಾನ; ಜುಲೈ 31 ಕೊನೆಯ ದಿನ

08/07/2025, 13:10

ಮಡಿಕೇರಿ(reporterkarnataka.com): ಭಾರತೀಯ ವಾಯು ಪಡೆಯಿಂದ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಥವಾ ಡಿಪ್ಲೋಮಾ ವಿಭಾಗದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಷ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‍ಸ್ಟ್ರುಮೆಂಟ್ ಟೆಕ್ನಾಲಜಿ, ಇನ್ಪಾರ್ಮೇಶನ್ ಟೆಕ್ನಾಲಜಿಯಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆ ಆಗಿರಬೇಕು. ಇಲ್ಲವೇ 02 ವರ್ಷದ ವೃತ್ತಿಪರ ಕೋರ್ಸ್‍ಗಳಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳನ್ನು ವ್ಯಾಸಂಗ ಮಾಡಿ ಶೇ.50 ರಷ್ಟು ಅಥವಾ ಯಾವುದೇ ಪಿಯುಸಿ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.
ಅಭ್ಯರ್ಥಿಯು 2005ರ ಜುಲೈ, 02 ರಿಂದ 2009ರ ಜನವರಿ, 02 ರ ನಡುವೆ ಜನಿಸಿರಬೇಕು. (ಎರಡೂ ದಿನಾಂಕಗಳು ಸೇರಿದಂತೆ) ಅರ್ಜಿ ಶುಲ್ಕ 550 ರೂ.ಗಳಾಗಿದೆ. ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ವಿವರ ಮತ್ತು ಸೂಚನೆಗಳಿಗೆ ವೆಬ್‍ಸೈಟ್ https://agnipathvayu.cdac.in ನೋಡಬಹುದು. ವೆಬ್‍ಸೈಟ್‍ನಲ್ಲಿ 2025 ರ ಜುಲೈ, 11 ರಿಂದ 31 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು