2:32 PM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಅಗ್ನಿವೀರ್ ವಾಯು ಪಡೆ ಪ್ರವೇಶ ಆಯ್ಕೆ ಪರೀಕ್ಷೆ: ಅರ್ಜಿ ಆಹ್ವಾನ; ಜುಲೈ 31 ಕೊನೆಯ ದಿನ

08/07/2025, 13:10

ಮಡಿಕೇರಿ(reporterkarnataka.com): ಭಾರತೀಯ ವಾಯು ಪಡೆಯಿಂದ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಥವಾ ಡಿಪ್ಲೋಮಾ ವಿಭಾಗದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಷ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‍ಸ್ಟ್ರುಮೆಂಟ್ ಟೆಕ್ನಾಲಜಿ, ಇನ್ಪಾರ್ಮೇಶನ್ ಟೆಕ್ನಾಲಜಿಯಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆ ಆಗಿರಬೇಕು. ಇಲ್ಲವೇ 02 ವರ್ಷದ ವೃತ್ತಿಪರ ಕೋರ್ಸ್‍ಗಳಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳನ್ನು ವ್ಯಾಸಂಗ ಮಾಡಿ ಶೇ.50 ರಷ್ಟು ಅಥವಾ ಯಾವುದೇ ಪಿಯುಸಿ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.
ಅಭ್ಯರ್ಥಿಯು 2005ರ ಜುಲೈ, 02 ರಿಂದ 2009ರ ಜನವರಿ, 02 ರ ನಡುವೆ ಜನಿಸಿರಬೇಕು. (ಎರಡೂ ದಿನಾಂಕಗಳು ಸೇರಿದಂತೆ) ಅರ್ಜಿ ಶುಲ್ಕ 550 ರೂ.ಗಳಾಗಿದೆ. ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ವಿವರ ಮತ್ತು ಸೂಚನೆಗಳಿಗೆ ವೆಬ್‍ಸೈಟ್ https://agnipathvayu.cdac.in ನೋಡಬಹುದು. ವೆಬ್‍ಸೈಟ್‍ನಲ್ಲಿ 2025 ರ ಜುಲೈ, 11 ರಿಂದ 31 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು