8:07 PM Thursday5 - February 2026
ಬ್ರೇಕಿಂಗ್ ನ್ಯೂಸ್
*ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್…

ಇತ್ತೀಚಿನ ಸುದ್ದಿ

Chikkamagaluru | ಸಾಯಲೆಂದ ಕೆರೆಗೆ ಹಾರಿ ಬದುಕಲೆಂದು ಆಂಜನೇಯನ ಕೂಗಿದ ಗೃಹಿಣಿ!: ಸ್ಥಳೀಯ ಹುಡ್ಗರಿಂದ ಮಹಿಳೆಯ ರಕ್ಷಣೆ

09/07/2025, 11:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಾಯಲೆಂದು ನಿರ್ಧರಿಸಿ ನೀರಿಗೆ ಹಾರಿ ನಂತರ ಬದುಕಿಸುವಂತೆ ಆಂಜನೇಯನನ್ನು ಬೇಡುತ್ತಿದ್ದ ಮಹಿಳೆಯನ್ನು ಸ್ಥಳೀಯರು ಹುಡ್ಗರು ರಕ್ಷಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ.



ಗಂಡನ ಜೊತೆ ಜಗಳವಾಡಿ ರಾಮನಹಳ್ಳಿ ನಿವಾಸಿ ರಂಜಿತಾ (35) ಎಂಬ ಗೃಹಿಣಿ ಕೆರೆ ಹಾರಿದ್ದರು. ನಂತರ ಮುಳುಗುತ್ತಿದ್ದಂತೆ ಆಂಜನೇಯ ಕಾಪಾಡು…. ಆಂಜನೇಯ ಕಾಪಾಡು.. ಎಂದು ಸಹಾಯಕ್ಕಾಗಿ ಬೊಬ್ಬೆ ಹಾಕಿದರು. ಪಕ್ಕದ ಹೋಂ ಸ್ಟೇ ಮಾಲೀಕ ರಮೇಶ್ ಅವರು ಇದನ್ನು ನೋಡಿ ಸ್ಥಳಕ್ಕೆ ಬಂದು ಹುಡುಗರ ಕರೆಸಿದ್ದಾರೆ. ಸಂಮತ್ ಮತ್ತು ಪ್ರಸನ್ನ ಎಂಬರು ತಕ್ಷಣ ನೀರಿಗೆ ಹಾರಿ ಮಹಿಳೆಯನ್ನು ದಡಕ್ಕೆ ತಂದಿದ್ದಾರೆ. ರಂಜಿತಾ ಅವರ
ಅದೃಷ್ಟ ಚೆನ್ನಾಗಿತ್ತು. ಸಕಾಲದಲ್ಲಿ ಹುಡುಗರು ಬಂದು ರಕ್ಷಿಸಿದ್ದಾರೆ.
ಚಿಕ್ಕಮಗಳೂರು ಬಸವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು