10:13 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Chikkamagaluru | ಸಾಯಲೆಂದ ಕೆರೆಗೆ ಹಾರಿ ಬದುಕಲೆಂದು ಆಂಜನೇಯನ ಕೂಗಿದ ಗೃಹಿಣಿ!: ಸ್ಥಳೀಯ ಹುಡ್ಗರಿಂದ ಮಹಿಳೆಯ ರಕ್ಷಣೆ

09/07/2025, 11:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಾಯಲೆಂದು ನಿರ್ಧರಿಸಿ ನೀರಿಗೆ ಹಾರಿ ನಂತರ ಬದುಕಿಸುವಂತೆ ಆಂಜನೇಯನನ್ನು ಬೇಡುತ್ತಿದ್ದ ಮಹಿಳೆಯನ್ನು ಸ್ಥಳೀಯರು ಹುಡ್ಗರು ರಕ್ಷಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ.



ಗಂಡನ ಜೊತೆ ಜಗಳವಾಡಿ ರಾಮನಹಳ್ಳಿ ನಿವಾಸಿ ರಂಜಿತಾ (35) ಎಂಬ ಗೃಹಿಣಿ ಕೆರೆ ಹಾರಿದ್ದರು. ನಂತರ ಮುಳುಗುತ್ತಿದ್ದಂತೆ ಆಂಜನೇಯ ಕಾಪಾಡು…. ಆಂಜನೇಯ ಕಾಪಾಡು.. ಎಂದು ಸಹಾಯಕ್ಕಾಗಿ ಬೊಬ್ಬೆ ಹಾಕಿದರು. ಪಕ್ಕದ ಹೋಂ ಸ್ಟೇ ಮಾಲೀಕ ರಮೇಶ್ ಅವರು ಇದನ್ನು ನೋಡಿ ಸ್ಥಳಕ್ಕೆ ಬಂದು ಹುಡುಗರ ಕರೆಸಿದ್ದಾರೆ. ಸಂಮತ್ ಮತ್ತು ಪ್ರಸನ್ನ ಎಂಬರು ತಕ್ಷಣ ನೀರಿಗೆ ಹಾರಿ ಮಹಿಳೆಯನ್ನು ದಡಕ್ಕೆ ತಂದಿದ್ದಾರೆ. ರಂಜಿತಾ ಅವರ
ಅದೃಷ್ಟ ಚೆನ್ನಾಗಿತ್ತು. ಸಕಾಲದಲ್ಲಿ ಹುಡುಗರು ಬಂದು ರಕ್ಷಿಸಿದ್ದಾರೆ.
ಚಿಕ್ಕಮಗಳೂರು ಬಸವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು