8:34 PM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

Shivamogga | ತೀರ್ಥಹಳ್ಳಿ ವೈದ್ಯರ ವರ್ಗಾವಣೆ ತಡೆ ಹಿಡಿಯುವಂತೆ ಮಾಜಿ ಸಚಿವ ಕಿಮ್ಮನೆ ಮನವಿ

09/07/2025, 16:22

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯ ವೈದ್ಯರ ವರ್ಗಾವಣೆ ತಡೆ ಹಿಡಿಯುವಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮನವಿ ಮಾಡಿದ್ದಾರೆ.
ತೀರ್ಥಹಳ್ಳಿಯ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯ ಪ್ರಮುಖ ಆರು ವೈದ್ಯರನ್ನು ವರ್ಗಾವಣೆಗೊಳಿಸಿ ಎಂದು ಸರ್ಕಾರ ಆದೇಶ ಮಾಡಿತ್ತು. ಸರ್ಕಾರದ ಆದೇಶದ ವರದಿಯನ್ನ ಗಮನಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಳಿ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ದೂರವಾಣಿ ಮೂಲಕ ಮಾತನಾಡಿದ್ದು ವೈದ್ಯರ ವರ್ಗಾವಣೆಯನ್ನು ತಡೆ ಹಿಡಿಯುವಂತೆ ಮನವಿ ಮಾಡಿದ್ದಾರೆ.
ಆಸ್ಪತ್ರೆಯಲ್ಲಿ ಇದ್ದಂತಹ ಆರು ವೈದ್ಯರನ್ನು ವರ್ಗಾವಣೆ ಮಾಡಲು ಆದೇಶ ಮಾಡಲಾಗಿದೆ. ಆದರೆ ಇಲ್ಲಿ ಬೇರೆ ವೈದ್ಯರ ನೇಮಕ ಆಗಿಲ್ಲ. ಅನಸ್ತೇಶಿಯ ವೈದ್ಯರು ಒಬ್ಬರೇ ಇದ್ದಾರೆ. ತಿಂಗಳಿಗೆ ಸುಮಾರು 40 ಹೆರಿಗೆಗಳು ಆಗುತ್ತವೆ.
ಈ ಎಲ್ಲಾ ಕಾರಣದಿಂದ ತಾತ್ಕಾಲಿಕವಾಗಿ ವರ್ಗಾವಣೆ ಆದೇಶವನ್ನು ತಡೆ ಹಿಡಿಯುವಂತೆ ಮನವಿ ಮಾಡಿದ್ದಾರೆ.
ಈಗಾಗಲೇ ಆರಗ ಜ್ಞಾನೇಂದ್ರ ಸಹ ವರ್ಗಾವಣೆ ಮಾಡಬಾರದು ಎಂದು ಪತ್ರ ಬರೆದಿದ್ದರು. ಈಗ ಕಿಮ್ಮನೆ ರತ್ನಾಕರ್ ಸಹ ತಡೆ ಹಿಡಿಯಬೇಕೆಂದು ತಿಳಿಸಿದ್ದು ವೈದ್ಯರು ವರ್ಗಾವಣೆ ಆಗುತ್ತಾರಾ? ಅಥವಾ ವರ್ಗಾವಣೆಗೆ ತಡೆ ಸಿಗುತ್ತಾ? ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು