9:06 PM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Shivamogga | ತೀರ್ಥಹಳ್ಳಿ ವೈದ್ಯರ ವರ್ಗಾವಣೆ ತಡೆ ಹಿಡಿಯುವಂತೆ ಮಾಜಿ ಸಚಿವ ಕಿಮ್ಮನೆ ಮನವಿ

09/07/2025, 16:22

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯ ವೈದ್ಯರ ವರ್ಗಾವಣೆ ತಡೆ ಹಿಡಿಯುವಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮನವಿ ಮಾಡಿದ್ದಾರೆ.
ತೀರ್ಥಹಳ್ಳಿಯ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯ ಪ್ರಮುಖ ಆರು ವೈದ್ಯರನ್ನು ವರ್ಗಾವಣೆಗೊಳಿಸಿ ಎಂದು ಸರ್ಕಾರ ಆದೇಶ ಮಾಡಿತ್ತು. ಸರ್ಕಾರದ ಆದೇಶದ ವರದಿಯನ್ನ ಗಮನಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಳಿ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ದೂರವಾಣಿ ಮೂಲಕ ಮಾತನಾಡಿದ್ದು ವೈದ್ಯರ ವರ್ಗಾವಣೆಯನ್ನು ತಡೆ ಹಿಡಿಯುವಂತೆ ಮನವಿ ಮಾಡಿದ್ದಾರೆ.
ಆಸ್ಪತ್ರೆಯಲ್ಲಿ ಇದ್ದಂತಹ ಆರು ವೈದ್ಯರನ್ನು ವರ್ಗಾವಣೆ ಮಾಡಲು ಆದೇಶ ಮಾಡಲಾಗಿದೆ. ಆದರೆ ಇಲ್ಲಿ ಬೇರೆ ವೈದ್ಯರ ನೇಮಕ ಆಗಿಲ್ಲ. ಅನಸ್ತೇಶಿಯ ವೈದ್ಯರು ಒಬ್ಬರೇ ಇದ್ದಾರೆ. ತಿಂಗಳಿಗೆ ಸುಮಾರು 40 ಹೆರಿಗೆಗಳು ಆಗುತ್ತವೆ.
ಈ ಎಲ್ಲಾ ಕಾರಣದಿಂದ ತಾತ್ಕಾಲಿಕವಾಗಿ ವರ್ಗಾವಣೆ ಆದೇಶವನ್ನು ತಡೆ ಹಿಡಿಯುವಂತೆ ಮನವಿ ಮಾಡಿದ್ದಾರೆ.
ಈಗಾಗಲೇ ಆರಗ ಜ್ಞಾನೇಂದ್ರ ಸಹ ವರ್ಗಾವಣೆ ಮಾಡಬಾರದು ಎಂದು ಪತ್ರ ಬರೆದಿದ್ದರು. ಈಗ ಕಿಮ್ಮನೆ ರತ್ನಾಕರ್ ಸಹ ತಡೆ ಹಿಡಿಯಬೇಕೆಂದು ತಿಳಿಸಿದ್ದು ವೈದ್ಯರು ವರ್ಗಾವಣೆ ಆಗುತ್ತಾರಾ? ಅಥವಾ ವರ್ಗಾವಣೆಗೆ ತಡೆ ಸಿಗುತ್ತಾ? ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು