12:54 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಗುಜರಾತ್: ಸೇತುವೆ ಕುಸಿತದಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ; 5 ಮಂದಿಯ ರಕ್ಷಣೆ

09/07/2025, 20:15

ಅಹಮದಾಬಾದ್(reporterkarnataka.com): ಗುಜರಾತ್‌ ನ ವಡೋದರಾ ಜಿಲ್ಲೆಯ ಮುಜ್‌ಪುರ ಬಳಿಯ ಸೇತುವೆಯೊಂದು ಬುಧವಾರ ಬೆಳಗ್ಗೆ ಕುಸಿದು ಬಿದ್ದ ಪರಿಣಾಮ ಹಲವಾರು ವಾಹನಗಳು ನದಿಗೆ ಬಿದ್ದು, ಕನಿಷ್ಠ 9 ಮಂದಿ ಸಾವನ್ನಪ್ಪಿದ್ದಾರೆ.
ಕೇವಲ 40 ವರ್ಷಗಳಷ್ಟು ಹಳೆಯದಾದ ಗಂಭೀರಾ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದೆ. ದುರಂತದಲ್ಲಿ ಐವರನ್ನು ರಕ್ಷಿಸಲಾಗಿದೆ.

ಯಾವುದೇ ಮುನ್ಸೂಚನೆ ಸಿಗದೆ ಸೇತುವೆ ಏಕಾಏಕಿ ಕುಸಿದು ಬಿದ್ದಿದ್ದು, ಎರಡು ಟ್ರಕ್‌ಗಳು, ಒಂದು ಪಿಕಪ್ ವ್ಯಾನ್ ಮತ್ತು ಇನ್ನೊಂದು ವಾಹನ ನದಿಗೆ ಬಿದ್ದಿವೆ. ಕೆಲವೇ ನಿಮಿಷಗಳಲ್ಲಿ, ಗ್ರಾಮಸ್ಥರು ಸುದ್ದಿ ಮುಟ್ಟಿಸಿ ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಐವರನ್ನು ರಕ್ಷಿಸುವಲ್ಲಿ ಸಫಲವಾಗಿದೆ.
ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ಭಾಗಗಳನ್ನು ಸಂಪರ್ಕಿಸುವ ನದಿಗೆ ಗಂಭೀರಾ ಸೇತುವೆ ನಿರ್ಮಿಸಲಾಗಿತ್ತು. ಇದರ ಸ್ಲ್ಯಾಬ್ ಕುಸಿದು ಐದಾರು ವಾಹನಗಳು ಮಹಿಸಾಗರ್ ನದಿಗೆ ಬಿದ್ದವು ಎಂದು ಗುಜರಾತ್ ಆರೋಗ್ಯ ಸಚಿವ ರುಷಿಕೇಶ್ ಪಟೇಲ್ ತಿಳಿಸಿದ್ದಾರೆ.
ಸೇತುವೆಯನ್ನು 1985 ರಲ್ಲಿ ನಿರ್ಮಿಸಲಾಗಿತ್ತು. ಅದರ ನಿರ್ವಹಣೆಯನ್ನು ಅಗತ್ಯವಿದ್ದಾಗ ನಿಯತಕಾಲಿಕವಾಗಿ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು