8:36 AM Wednesday3 - September 2025
ಬ್ರೇಕಿಂಗ್ ನ್ಯೂಸ್
ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ ಗಣೇಶ ವಿಸರ್ಜನೆ: ಕುಶಾಲನಗರದಲ್ಲಿ ನಿಯಮ ಉಲ್ಲಂಘಿಸಿದ 5 ಡಿಜೆ ವಾಹನ ಪೊಲೀಸ್ ವಶಕ್ಕೆ ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ

ಇತ್ತೀಚಿನ ಸುದ್ದಿ

ಕುಲಶೇಖರ ಪದವು ಶ್ರೀ ಶನೈಶ್ಚರ ದೇವಸ್ಥಾನ: ಜು.13ರಿಂದ ತನು ಮನ ಧನ ಸಂಗ್ರಹ ಅಭಿಯಾನ

09/07/2025, 21:14

ಮಂಗಳೂರು(reporterkarnataka.com):ಹಿಂದೂ ಯುವ ಸೇನೆಯ ಪದವು ಶಾಖೆಯು ಕಳೆದ ಎರಡೂವರೆ ದಶಕಗಳ ಪೂರ್ವದಲ್ಲಿ ಮಂಗಳೂರಿನ ಕುಲಶೇಖರ ಪದವು ಮೇಗಿನ ಮನೆ ಪರಿಸರದಲ್ಲಿ ನಿರ್ಮಿಸಿದ್ದ ಶ್ರೀ ಶನೈಶ್ಚರ ಮಂದಿರವನ್ನು ದೇವಸ್ಥಾನ ಸ್ವರೂಪದಲ್ಲಿ ಪುನರ್ ನಿರ್ಮಾಣ ಮಾಡುವ ಸಂಕಲ್ಪದೊಂದಿಗೆ ದೇವಸ್ಥಾನ ನಿರ್ಮಾಣ ಶಿಲಾನ್ಯಾಸ ನೆರವೇರಿಸಲಾಗಿದ್ದು, ಈ ದೆಶೆಯಲ್ಲಿ ಗ್ರಾಮದ ಜನರಿಂದ ತನು ಮನ ಧನದ ಸಹಕಾರವನ್ನು ಯಾಚಿಸುತ್ತಿದ್ದು ಜು.13ರಂದು ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದ್ದು ಇದಕ್ಕಾಗಿ 11 ವಲಯ ಸಮಿತಿಗಳನ್ನು ರಚಿಸಲಾಗಿದೆ.
ಈ ಕುರಿತು ಅಧ್ಯಕ್ಷ ಕದ್ರಿ ನವನೀತ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಶ್ರೀ ದುರ್ಗಾ ದೇವಿ ಹಾಗೂ ಮಹಾಗಣಪತಿ ಗುಡಿ ಸಹಿತ ಶ್ರೀ ಶನಿ ದೇವರ ದೇವಸ್ಥಾನ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ನವೆಂಬರ್ 2025ರಲ್ಲಿ ಪ್ರತಿಷ್ಠೆ ಬ್ರಹ್ಮಕಲಶ ನಡೆಸಲಾಗುವುದು ಎಂದು ನವನೀತ್ ಶೆಟ್ಟಿ ಹೇಳಿದರು.
ಈಗಾಗಲೇ ಮಂದಿರದ ಸಮೀಪ 8 ಸೆಂಟ್ಸ್ ಸ್ಥಳವನ್ನು ಖರೀದಿ ಮಾಡಲಾಗಿದ್ದು ಇನ್ನೂ ಹೆಚ್ಚುವರಿ 10 ಸೆಂಟ್ಸ್ ಜಮೀನು ಖರೀದಿ ಮಾಡುವ ಯೋಜನೆ ಇದೆ.
ಈ ಯೋಜನೆಗೆ ಒಟ್ಟು 3 ಕೋಟಿ ರೂಪಾಯಿ ವೆಚ್ಚ ತಗಲಲಿದೆ.
ದೇವಸ್ಥಾನದ ನಿರ್ಮಾಣ ಕಾರ್ಯವು ಊರ ಪರವೂರ ಭಕ್ತರ ಸಹಾಯದಿಂದ ಭರದಿಂದ ಸಾಗುತ್ತಿದ್ದು ಮುಂದಿನ ಕೆಲಸ ಕಾರ್ಯಗಳಿಗೆ ಆರ್ಥಿಕ ಕ್ರೋಡಿಕರಣವಾಗಬೇಕಾಗಿದೆ.
2018ರಲ್ಲಿ ಪದವು ಶನೈಶ್ಚರ ಪೂಜಾ ಸಮಿತಿ ಟ್ರಸ್ಟ್‌ನ ನೇತೃತ್ವದಲ್ಲಿ 7 ದಿನ ಪರ್ಯಂತ ಜರಗಿದ್ದ ಚಾರಿತ್ರಿಕ ಶ್ರೀ ಸಗ್ರಹಮುಖ ಶನೈಶ್ಚರ ಮಹಾಯಾಗದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಸ್ವಯಂಸೇವಕರ, ಭಕ್ತರ ಭಕ್ತಿಯ ಫಲಶ್ರುತಿಯಿಂದಾಗಿ ಶನಿದೇವರ ದೇವಸ್ಥಾನವು ನಿರ್ಮಾಣವಾಗುತ್ತಿದೆ ಎಂದವರು ತಿಳಿಸಿದರು.
ಈ ದೆಶೆಯಲ್ಲಿ ಗ್ರಾಮದ ಜನರಿಂದ ತನು ಮನ ಧನದ ಸಹಕಾರವನ್ನು ಯಾಚಿಸುತ್ತಿದ್ದು ಜು.13ರಂದು ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದ್ದು ಇದಕ್ಕಾಗಿ 11 ವಲಯ ಸಮಿತಿಗಳನ್ನು ರಚಿಸಲಾಗಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಗೌರವಾಧ್ಯಕ್ಷ ಮೋನಪ್ಪ ಭಂಡಾರಿ, ಪ್ರಧಾನ ಕಾರ್ಯದರ್ಶಿ ಕಿಶೋರ್ ಕೊಟ್ಟಾರಿ, ಮಾತೃ ಮಂಡಳಿ ಅಧ್ಯಕ್ಷೆ ವಿಜಯ ಅರುಣ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು