5:43 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಬಂದೂಕು ಸೌಲಭ್ಯ ದುರುಪಯೋಗ: ಲೈಸೆನ್ಸ್​​ಗಾಗಿ ನಕಲಿ ದಾಖಲೆ ಸೃಷ್ಟಿ; ಒಂದೇ ಜಾಗದ ಹೆಸರಿನಲ್ಲಿ ಇಬ್ಬರಿಗೆ ಪರವಾನಗಿ!

10/07/2025, 10:02

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಲ್ಲಿ ಜಮ್ಮ ಜಾಗದ ಹೆಸರಿನಲ್ಲಿ ಬಂದೂಕು ಪರವಾನಗಿ ಪಡೆಯುವ ಅಕ್ರಮ ಪ್ರಕರಣ ಬೆಳಕಿಗೆ ಬಂದಿದೆ. ಜಮ್ಮ ಜಾಗದ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಂದೂಕು ಪರವಾನಗಿ ಪಡೆದಿರುವುದು ಪತ್ತೆಯಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಇಂತಹ ಹೆಚ್ಚಿನ ಪ್ರಕರಣಗಳು ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಬೇರೊಬ್ಬರ ಹೆಸರಿನಲ್ಲಿರುವ ಜಮ್ಮ ಜಾಗ ತಮ್ಮದೆಂದು ನಕಲಿ ದಾಖಲೆಗಳನ್ನು ನೀಡಿ ಬಂದೂಕು ಪರವಾನಗಿ (Gun License) ಪಡೆದಿರುವುದು ಪೊಲೀಸರ ತಪಾಸಣೆ ವೇಳೆ ಬಯಲಾಗಿದೆ. ಇತ್ತೀಚೆಗೆ ಭಾಗಮಂಡಲ ಪೊಲೀಸರು ಬಂದೂಕು ಪರವಾನಗಿ ನವೀಕರಣ ಪರಿಶೀಲಿಸುವ ಸಂದರ್ಭದಲ್ಲಿ ಈ ಅಕ್ರಮ ಬೆಳಕಿಗೆ ಬಂದಿದೆ.

ಭಾಗಮಂಡಲದ ಬಾಲಕೃಷ್ಣ ಎಂಬುವರು ಜಮ್ಮ ಜಾಗದ ಆಧಾರದ ಮೇಲೆ ಬಂದೂಕು ಪರವಾನಗಿ ಹೊಂದಿದ್ದಾರೆ. ಆದರೆ, ಇವರಿಗೆ ಅರಿವಿಲ್ಲದೆ ಮತ್ತೊಬ್ಬ ಬಾಲಕೃಷ್ಣ ಎಂಬುವರು ಆ ಜಮ್ಮ ಜಾಗ ತಮ್ಮದೆಂದು ನಕಲಿ ದಾಖಲೆಗಳನ್ನು ನೀಡಿ ಬಂದೂಕು ಖರೀದಿಸಿ, ಪರವಾನಗಿ ಪಡೆದಿದ್ದಾರೆ. ಒಂದೇ ಜಮ್ಮ ಜಾಗದ ಹೆಸರಲ್ಲಿ ಇಬ್ಬರು ಬಂದೂಕು ಪರವಾನಿಗಿ ಪಡೆದಿದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಎಷ್ಟು ಜನ ಇದೇ ರೀತಿ ಅಕ್ರಮವಾಗಿ ಬಂದೂಕು ಪರವಾನಿಗೆ ಪಡೆದಿದ್ದಾರೆ ಎಂಬುವುದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಇನ್ನು, ಜಿಲ್ಲಾಡಳಿತ ಪರಿಶಿಲಿಸದೆ ಹೇಗೆ ಬಂದೂಕು ಪರವಾನಿಗಿ ನೀಡಿದೆ ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು