5:24 AM Sunday28 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಬಂದೂಕು ಸೌಲಭ್ಯ ದುರುಪಯೋಗ: ಲೈಸೆನ್ಸ್​​ಗಾಗಿ ನಕಲಿ ದಾಖಲೆ ಸೃಷ್ಟಿ; ಒಂದೇ ಜಾಗದ ಹೆಸರಿನಲ್ಲಿ ಇಬ್ಬರಿಗೆ ಪರವಾನಗಿ!

10/07/2025, 10:02

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಲ್ಲಿ ಜಮ್ಮ ಜಾಗದ ಹೆಸರಿನಲ್ಲಿ ಬಂದೂಕು ಪರವಾನಗಿ ಪಡೆಯುವ ಅಕ್ರಮ ಪ್ರಕರಣ ಬೆಳಕಿಗೆ ಬಂದಿದೆ. ಜಮ್ಮ ಜಾಗದ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಂದೂಕು ಪರವಾನಗಿ ಪಡೆದಿರುವುದು ಪತ್ತೆಯಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಇಂತಹ ಹೆಚ್ಚಿನ ಪ್ರಕರಣಗಳು ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಬೇರೊಬ್ಬರ ಹೆಸರಿನಲ್ಲಿರುವ ಜಮ್ಮ ಜಾಗ ತಮ್ಮದೆಂದು ನಕಲಿ ದಾಖಲೆಗಳನ್ನು ನೀಡಿ ಬಂದೂಕು ಪರವಾನಗಿ (Gun License) ಪಡೆದಿರುವುದು ಪೊಲೀಸರ ತಪಾಸಣೆ ವೇಳೆ ಬಯಲಾಗಿದೆ. ಇತ್ತೀಚೆಗೆ ಭಾಗಮಂಡಲ ಪೊಲೀಸರು ಬಂದೂಕು ಪರವಾನಗಿ ನವೀಕರಣ ಪರಿಶೀಲಿಸುವ ಸಂದರ್ಭದಲ್ಲಿ ಈ ಅಕ್ರಮ ಬೆಳಕಿಗೆ ಬಂದಿದೆ.

ಭಾಗಮಂಡಲದ ಬಾಲಕೃಷ್ಣ ಎಂಬುವರು ಜಮ್ಮ ಜಾಗದ ಆಧಾರದ ಮೇಲೆ ಬಂದೂಕು ಪರವಾನಗಿ ಹೊಂದಿದ್ದಾರೆ. ಆದರೆ, ಇವರಿಗೆ ಅರಿವಿಲ್ಲದೆ ಮತ್ತೊಬ್ಬ ಬಾಲಕೃಷ್ಣ ಎಂಬುವರು ಆ ಜಮ್ಮ ಜಾಗ ತಮ್ಮದೆಂದು ನಕಲಿ ದಾಖಲೆಗಳನ್ನು ನೀಡಿ ಬಂದೂಕು ಖರೀದಿಸಿ, ಪರವಾನಗಿ ಪಡೆದಿದ್ದಾರೆ. ಒಂದೇ ಜಮ್ಮ ಜಾಗದ ಹೆಸರಲ್ಲಿ ಇಬ್ಬರು ಬಂದೂಕು ಪರವಾನಿಗಿ ಪಡೆದಿದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಎಷ್ಟು ಜನ ಇದೇ ರೀತಿ ಅಕ್ರಮವಾಗಿ ಬಂದೂಕು ಪರವಾನಿಗೆ ಪಡೆದಿದ್ದಾರೆ ಎಂಬುವುದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಇನ್ನು, ಜಿಲ್ಲಾಡಳಿತ ಪರಿಶಿಲಿಸದೆ ಹೇಗೆ ಬಂದೂಕು ಪರವಾನಿಗಿ ನೀಡಿದೆ ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು