5:13 PM Thursday5 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಬಂದೂಕು ಸೌಲಭ್ಯ ದುರುಪಯೋಗ: ಲೈಸೆನ್ಸ್​​ಗಾಗಿ ನಕಲಿ ದಾಖಲೆ ಸೃಷ್ಟಿ; ಒಂದೇ ಜಾಗದ ಹೆಸರಿನಲ್ಲಿ ಇಬ್ಬರಿಗೆ ಪರವಾನಗಿ!

10/07/2025, 10:02

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಲ್ಲಿ ಜಮ್ಮ ಜಾಗದ ಹೆಸರಿನಲ್ಲಿ ಬಂದೂಕು ಪರವಾನಗಿ ಪಡೆಯುವ ಅಕ್ರಮ ಪ್ರಕರಣ ಬೆಳಕಿಗೆ ಬಂದಿದೆ. ಜಮ್ಮ ಜಾಗದ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಂದೂಕು ಪರವಾನಗಿ ಪಡೆದಿರುವುದು ಪತ್ತೆಯಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಇಂತಹ ಹೆಚ್ಚಿನ ಪ್ರಕರಣಗಳು ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಬೇರೊಬ್ಬರ ಹೆಸರಿನಲ್ಲಿರುವ ಜಮ್ಮ ಜಾಗ ತಮ್ಮದೆಂದು ನಕಲಿ ದಾಖಲೆಗಳನ್ನು ನೀಡಿ ಬಂದೂಕು ಪರವಾನಗಿ (Gun License) ಪಡೆದಿರುವುದು ಪೊಲೀಸರ ತಪಾಸಣೆ ವೇಳೆ ಬಯಲಾಗಿದೆ. ಇತ್ತೀಚೆಗೆ ಭಾಗಮಂಡಲ ಪೊಲೀಸರು ಬಂದೂಕು ಪರವಾನಗಿ ನವೀಕರಣ ಪರಿಶೀಲಿಸುವ ಸಂದರ್ಭದಲ್ಲಿ ಈ ಅಕ್ರಮ ಬೆಳಕಿಗೆ ಬಂದಿದೆ.

ಭಾಗಮಂಡಲದ ಬಾಲಕೃಷ್ಣ ಎಂಬುವರು ಜಮ್ಮ ಜಾಗದ ಆಧಾರದ ಮೇಲೆ ಬಂದೂಕು ಪರವಾನಗಿ ಹೊಂದಿದ್ದಾರೆ. ಆದರೆ, ಇವರಿಗೆ ಅರಿವಿಲ್ಲದೆ ಮತ್ತೊಬ್ಬ ಬಾಲಕೃಷ್ಣ ಎಂಬುವರು ಆ ಜಮ್ಮ ಜಾಗ ತಮ್ಮದೆಂದು ನಕಲಿ ದಾಖಲೆಗಳನ್ನು ನೀಡಿ ಬಂದೂಕು ಖರೀದಿಸಿ, ಪರವಾನಗಿ ಪಡೆದಿದ್ದಾರೆ. ಒಂದೇ ಜಮ್ಮ ಜಾಗದ ಹೆಸರಲ್ಲಿ ಇಬ್ಬರು ಬಂದೂಕು ಪರವಾನಿಗಿ ಪಡೆದಿದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಎಷ್ಟು ಜನ ಇದೇ ರೀತಿ ಅಕ್ರಮವಾಗಿ ಬಂದೂಕು ಪರವಾನಿಗೆ ಪಡೆದಿದ್ದಾರೆ ಎಂಬುವುದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಇನ್ನು, ಜಿಲ್ಲಾಡಳಿತ ಪರಿಶಿಲಿಸದೆ ಹೇಗೆ ಬಂದೂಕು ಪರವಾನಿಗಿ ನೀಡಿದೆ ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು