10:50 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

Shivamogga | ಗುಡ್ಡ ಕುಸಿಯುವ ಭೀತಿ: ಶಿವಮೊಗ್ಗ- ತೀರ್ಥಹಳ್ಳಿ ಸಂಪರ್ಕದ ಭಾರತೀಪುರ ಫ್ಲೈ ಓವರ್ ಒಂದು ಭಾಗ ಬಂದ್

11/07/2025, 16:04

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ

info.reporterkarnataka@gmail.com

ಕೋಟಿ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯಾಗಿದ್ದ ಭಾರತೀಪುರ ಫ್ಲೈ ಓವರ್ ಈಗ ಒಂದು ಭಾಗ ಸಂಚಾರ ಬಂದ್ ಮಾಡಲಾಗಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಬರುವಾಗ ಎಡ ಭಾಗದಲ್ಲಿ ಬ್ಯಾರಿಕೆಡ್ ಹಾಕಿ ಸಂಚಾರ ಬಂದ್ ಮಾಡಲಾಗಿದ್ದು, ಧರೆ ಕುಸಿಯುವ ಭೀತಿಯಿಂದ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.
ಮಳೆಗಾಲ ಸಂದರ್ಭದಲ್ಲಿ ಎಲ್ಲೆಡೆ ಭೂ ಕುಸಿತ, ಧರೆ ಕುಸಿತ ಆಗುತ್ತದೆ. ಆದರೆ ಭಾರತೀಪುರದಲ್ಲಿ ಧರೆ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಹಾಗೂ ಗುತ್ತಿಗೆದಾರರೇ ಕಾರಣ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಮಳೆಗಾಲದಲ್ಲಿ ಕುಸಿಯುತ್ತದೆ ಎಂಬ ಪರಿಜ್ಞಾನ ಸಹ ಇಲ್ಲದೆ ಇಲ್ಲಿಯವರೆಗೆ ಗುಡ್ಡ ಕುಸಿಯುವುದನ್ನು ತಡೆಯಲು ಪ್ರಯತ್ನ ಸಹ ಮಾಡಿಲ್ಲ. ಈಗ ಕುಸಿದು ಬಿದ್ದರೆ ತಕ್ಷಣ ಅದರಿಂದ ತುರ್ತು ಕಾಮಗಾರಿ ಎಂದು ಮತ್ತೆ ಬಿಲ್ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ.


ಈ ಮಧ್ಯೆ ಕುಡು ಮಲ್ಲಿಗೆಯಿಂದ ಕೂಗಳತೆ ದೂರದಲ್ಲಿ ಮತ್ತೊಂದು ರಸ್ತೆ ಮಾಡುತ್ತಿದ್ದು ಅದು ಚಿಟ್ಟೆಬೈಲು ಸಂಪರ್ಕ ಮಾಡುತ್ತದೆ ಎನ್ನಲಾಗುತ್ತಿದೆ. ಈಗಾಗಲೇ ಅದಕ್ಕೆ ಜಲ್ಲಿ ಕಲ್ಲು ಸಹ ಹಾಕಲಾಗಿದೆ. ಅದಕ್ಕೆ ಕಾರಣ ಒಂದು ವೇಳೆ ಗುಡ್ಡ ಕುಸಿತ ದೊಡ್ಡ ಮಟ್ಟದಲ್ಲಿ ಆದರೆ ಪರ್ಯಾಯ ಮಾರ್ಗ ಎಂಬ ಮಾತು ಕೇಳಿ ಬಂದಿದೆ. ಇವರ ಕೆಲಸ ನೋಡುತ್ತಿದ್ದರೆ ಗುಡ್ಡ ಕುಸಿಯುವುದನ್ನೇ ಅಧಿಕಾರಿಗಳು ಕಾಯುತ್ತಿದ್ದಾರಾ? ಎಂಬುದಾಗಿ ಸಾರ್ವಜನಿಕರು ಪ್ರೆಶ್ನೆ ಮಾಡುತ್ತಿದ್ದಾರೆ.
ಒಟ್ಟಿನಲ್ಲಿ ಇದೇ ತರ ಮಳೆ ಜಾಸ್ತಿ ಆದರೆ ಭಾರತೀಪುರ ಫ್ಲೈ ಓವರ್ ಮುಚ್ಚುತ್ತದೆಯೇ ಎಂಬ ಪ್ರೆಶ್ನೆ ಉದ್ಭವವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು