10:08 PM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು: ಶಾಸಕ ಪೊನ್ನಣ್ಣ

11/07/2025, 17:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಮುಂದಿನ 3 ತಿಂಗಳಲ್ಲಿ ಜಿಲ್ಲೆಯ ಅದಿವಾಸಿಗಳಿಗೆ ಮುಖ್ಮಮಂತ್ರಿಗಳಿಂದ ಹಕ್ಕು ಪತ್ರ ವಿತರಣೆಯ ಮಹತ್ವದ ತೀಮಾ೯ನ ಕೈ ಗೊಳ್ಳಲಾಗಿದೆ.
ಎಂದು ಶಾಸಕ ಎ. ಎಸ್. ಪೊನ್ನಣ್ಣ ಹೇಳಿದರು.
ಮಡಿಕೇರಿಯಲ್ಲಿ ನಡೆದ ಸುದ್ದಿ ಗೋಷ್ಟಿಯಲ್ಲಿ ಮಾಹಿತಿ ನೀಡಿದ ಶಾಸಕ ಪೊನ್ನಣ್ಣ ಅವರು, ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ ತಾಲೂಕು ವ್ಯಾಪ್ತಿಯಲ್ಲಿ ನಿವೇಶನ ರಹಿತ ಆದಿವಾಸಿಗಳನ್ನು ಸಮೀಕ್ಷೆ ಮೂಲಕ ಗುರುತಿಸಲಾಗಿದ್ದು ಸುಮಾರು 60 ಎಕ್ರೆ ಸಕಾ೯ರಿ ಜಾಗದಲ್ಲಿ ನಿವೇಶನ ರಹಿತ ಆದಿವಾಸಿಗಳಿಗೆ ನಿವೇಶನದ ಹಕ್ಕು ಪತ್ರ ನೀಡಿಕೆಗೆ ನಿಧಾ೯ರ ಮಾಡಲಾಗಿದೆ.
ಮುಂದಿನ ದಿನಗಳಲ್ಲಿ ಸಿಕ್ಕಸಿಕ್ಕಲ್ಲಿ ಶೆಡ್ ನಿಮಿ೯ಸಿ ಮನೆ ನಿರ್ಮಿಸಬೇಡಿ ಎಂದು ಪೊನ್ನಣ್ಣ ಮನವಿ ಮಾಡಿದರು.
ನಾಡಿನಲ್ಲಿ ಕೖಷಿ ಜಮೀನು ನಾಶ ಪಡಿಸುತ್ತಿರುವ ಆನೆಗಳನ್ನು ಕಾಡಿಗಟ್ಟಲು ಮಹತ್ವದ ಕ್ರಮಕ್ಕೆ ಅರಣ್ಯ ಇಲಾಖೆ ಮುಂದಾಗಿದ್ದು,ಈಗಾಗಲೇ 4 ಹುಲಿಗಳನ್ನು ಸೆರೆ ಹಿಡಿಯಲು ಸಕಾ೯ರ ಅನುಮತಿ ನೀಡಿದೆ.
ಹೀಗಿದ್ದರೂ ಹುಲಿಗಳನ್ನು ಗುರುತಿಸಿ ಸೆರೆಹಿಡಿಯಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಹುಲಿ ಸೆರೆಗೆ ಆದೇಶ ನೀಡಲಾಗಿದೆ. ಗುರುವಾರ ಅರಣ್ಯ ಇಲಾಖೆಯ ಅಧಿಕಾರಿ ವಗ೯ದೊಂದಿಗೆ ಮಹತ್ವದ ಸಭೆ ನಡೆಸಿ ವಿರಾಜಪೇಟೆ ಕ್ಷೇತ್ರದಲ್ಲಿ ಆನೆ, ಹುಲಿ ದಾಂಧಲೆಗೆ ಶಾಶ್ವತ ಕಡಿವಾಣ ಹಾಕುವ ನಿಟ್ಟಿನಲ್ಲಿ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತೀರ ಧಮ೯ಜ ಉತ್ತಪ್ಪ, ಜಿಪಂ ಮಾಜಿ ಅಧ್ಯಕ್ಷ ಪಿ.ಕೆ. ಪೊನ್ನಪ್ಪ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು