9:07 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

ಗುರುಪೂರ್ಣಿಮೆ: ಮಸ್ಕಿ ಗಚ್ಚಿನ ಹಿರೇಮಠದ ಷಟಸ್ಥಳ ಬ್ರಹ್ಮ ಶ್ರೀವರ ರುದ್ರಮುನಿ ಶಿವಾಚಾರ್ಯ ಮಹಾ ಸ್ವಾಮಿಗಳಿಗೆ ಗುರುವಂದನೆ

11/07/2025, 22:07

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ಹೆಚ್ಚಿನ ಹಿರೇಮಠದಲ್ಲಿ ಗುರುವಂದನ ಕಾರ್ಯಕ್ರಮದಲ್ಲಿ ಮಸ್ಕಿ ಪೂಜ್ಯಶ್ರೀ ಷಟಸ್ಥಲ ಬ್ರಹ್ಮ ವರ ರುದ್ರಮುನಿ ಶಿವಾಚಾರ್ಯರಿಗೆ ಗುರು ವಂದನ ಕಾರ್ಯಕ್ರಮ ಸಲ್ಲಿಸಲಾಯಿತು.

ಇದೇ ಸಂದರ್ಭದಲ್ಲಿ ಗುರು ಶಿಷ್ಯರ ಸಮ್ಮಿಲನ ಕಾರ್ಯಕ್ರಮದ ಬಗ್ಗೆ ಮಸ್ಕಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಮಾತನಾಡಿದರು.
ಜೀವನದಲ್ಲಿ ಮುಂದೆ ಗುರಿ ಇರಬೇಕು ಹಿಂದೆ ಗುರು ಇರಬೇಕು. ಯಾರಿಂದಲೂ ಅಪಹರಿಸಲಾಗದ ವಿದ್ಯೆಯನ್ನು ಧಾರೆ ಎರೆಯುವವರು ಗುರುಗಳು. ಭಾರತೀಯ ಸಂಸ್ಕೃತಿಯಲ್ಲಿ ಗುರು-ಶಿಷ್ಯ ಪರಂಪರೆಗೆ ಅನಾದಿ ಕಾಲದಿಂದಲೂ ವಿಶೇಷ ಸ್ಥಾನಮಾನವಿದೆ ಎಂದರು.
ವೇದಕಾಲದಿಂದ ಇಂದಿನವರೆಗೂ ಜ್ಞಾನವನ್ನು ಒಂದು ಪೀಳಿಗೆಯಿಂದ ಇನ್ನೊಂದು ಪೀಳಿಗೆಗೆ ದಾಟಿಸುತ್ತಾ ಬಂದವರು ಗುರುಗಳು. ಈ ‘ಗುರು ಪೂರ್ಣಿಮೆ’ ಯ ಪುಣ್ಯ ದಿನದಂದು, ನಮ್ಮ ಜೀವನಕ್ಕೆ ಬೆಳಕಾದ ಎಲ್ಲಾ ಗುರುಗಳಿಗೆ ನಮ್ರತೆಯಿಂದ ನಮಿಸೋಣ ಎಂದು ಹೇಳಿದರು.
ಬಿಜೆಪಿ ಮಂಡಲ ಅಧ್ಯಕ್ಷ ಶರಣಬಸವ ಸೊಪ್ಪಿಮಠ ಅವರು ಗುರು ವಂದನೆ ಸಲ್ಲಿಸಿ “ಭಾರತೀಯ ಸಂಸ್ಕೃತಿಯಲ್ಲಿ ಗುರುವಿನ ಸ್ಥಾನ ಅತ್ಯಂತ ಶ್ರೇಷ್ಠ’. ಅಜ್ಞಾನದ ಅಂಧಕಾರವನ್ನು ತೊಲಗಿಸಿ, ಸುಜ್ಞಾನ ಜ್ಯೋತಿಯನ್ನು ಬೆಳಗಿಸುವ ಗುರು ಪ್ರತ್ಯಕ್ಷ ದೇವರು. ಮೌಲ್ಯವನ್ನು ಬಿತ್ತುವ ಎಲ್ಲಾ ಗುರುಗಳನ್ನು ಸ್ಮರಿಸುವ ಈ ಪುಣ್ಯದಿನದಂದು ನಾಡಿನ ಸಮಸ್ತ ಜನತೆಗೆ ಗುರುಪೂರ್ಣಿಮೆಯ ಹಾರ್ದಿಕ ಶುಭಾಶಯ ತಿಳಿಸಿದರು.
ಇದೇ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರಾದ ಡಾ. ಬಿ. ಎಚ್. ದಿವಟರ, ಪಂಪಣ್ಣ ಗುಂಡಳ್ಳಿ, ಶಿವಶಂಕ್ರಪ್ಪ ಹಳ್ಳಿ, ಪ್ರಸನ್ನ ಪಾಟೀಲ್, ಪುರಸಭೆ ಅಧ್ಯಕ್ಷರಾದ ಮಲ್ಲಯ್ಯ ಅಂಬಾಡಿ, ಉಪಾಧ್ಯಕ್ಷರಾದ ಗೀತಾ ಶಿವರಾಜ್ ಬುಕ್ಕಣ್ಣ, ದೊಡ್ಡಪ್ಪ ಬುಳ್ಳ, ಸಿದ್ದಲಿಂಗಯ್ಯ, ವೆಂಕಟೇಶ್ ನಾಯಕ್, ಸುಗಣ್ಣ ಬಾಳೆಕಾಯಿ, ಮೌನೇಶ್ ನಾಯಕ್, ನಾಗರಾಜ್
ಯoಬಲದ್, ಪುರಸಭೆ ಸದಸ್ಯರಾದ ಸುರೇಶ್ ಅರಸೂರು, ಚೇತನ್ ಪಾಟೀಲ್, ಮಂಜುನಾಥ್ ನಂದ್ಯಾಳ್ ಡಾ. ಸಂತೋಷ್ ಪತ್ತಾರ್, ಡಾ. ನಾಗನಗೌಡ ಸಿದ್ದನಗೌಡ ಉದ್ಬಾಳ್ ಶಾಮಿದ್ ಯಮನಪ್ಪ ಬೋವಿ ಶರಣೇಗೌಡ, ಪೊಲೀಸ್ ಪಾಟೀಲ್, ಮಂಜುನಾಥ ಬ್ಯಾಳಿ, ಚಂದ್ರಕಾಂತ್ ಗುರುವಂದನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು