11:44 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಡ್ರಗ್ಸ್ ಪ್ರಕರಣ: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 40 ಕೇಸ್ ದಾಖಲು; 67 ಮಂದಿ ಬಂಧನ

12/07/2025, 00:02

ಮಂಗಳೂರು(reporterkarnataka.com): ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಮಾರಾಟ/ಸಾಗಟ ಮಾಡುವವರ ವಿರುದ್ಧ 2025ನೇ ಸಾಲಿನಲ್ಲಿ ಇದುವರೆಗೆ 40 ಪ್ರಕರಣ ದಾಖಲಿಸಿ 67 ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ವಿವಿಧ ಆರೋಪಿಗಳಿಂದ ಆರೋಪಿಗಳಿಂದ 1.36 ಕೋಟಿ ರೂ. ಮೌಲ್ಯದ 145.324 ಕೆ.ಜಿ.ಗಾಂಜಾ, 319ಗ್ರಾಂ ಎಂಡಿಎಂಎ, 13 ಗ್ರಾಂ ಎಂ.ಡಿ.ಎಂ.ಎ ಪಿಲ್ಸ್, 756 ಗ್ರಾಂ ಹೈಡ್ರೋ ವೀಡ್ ಗಾಂಜಾ ಹಾಗೂ ಇತರ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಲಾಗಿದೆ. ಅದೇ ರೀತಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿ 2025ನೇ ಸಾಲಿನಲ್ಲಿ 335 ಪ್ರಕರಣಗಳನ್ನು ದಾಖಲಿಸಿ 376 ಮಂದಿಯನ್ನು ಬಂಧಿಸಲಾಗಿದೆ.
ನ್ಯಾಯಾಲಯದ ಅನುಮತಿ ಪಡೆದು ಮಂಗಳೂರು ನಗರ ವ್ಯಾಪ್ತಿಯ 9 ಠಾಣೆಗಳ ಒಟ್ಟು 23 ಪ್ರಕರಣಗಳಲ್ಲಿ ಸ್ವಾಧೀನ ಪಡಿಸಿಕೊಳ್ಳಲಾಗಿದ್ದ 21.320 ಕೆ.ಜಿ. ಗಾಂಜಾ ಮತ್ತು 60 ಗ್ರಾಂ ಎಂ.ಡಿ.ಎಂ.ಎ.ಯನ್ನು ಮೂಲ್ಕಿಯ ಕೊಲ್ನಾಡು ಕೈಗಾರಿಕ ಪ್ರದೇಶದಲ್ಲಿರುವ ರಿಸಸ್ಟೈನೆಬಿಲಿಟಿ ಹೆಲ್ತ್ ಕೇರ್ ಸೊಲ್ಯೂಷನ್ಸ್ ಸಂಸ್ಥೆಯಲ್ಲಿ ಗುರುವಾರ ಬೆಳಗ್ಗೆ ನಾಶ ಪಡಿಸಲಾಗಿದೆ.
ಈ ಹಿಂದೆ ಜ.15ರಂದು ನಗರದ ವಿವಿಧ ಠಾಣೆಗಳಲ್ಲಿ ದಾಖಲಾದ ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಮಾದಕ ಸೊತ್ತುಗಳನ್ನು ನಾಶ ಮಾಡಲಾಗಿತ್ತು. ಆಗ ಒಟ್ಟು 6.80 ಕೋ.ರೂ. ಮೌಲ್ಯದ 335 ಕೆ.ಜಿ. ಗಾಂಜಾ, 7.640 ಕೆ.ಜಿ. ಎಂ.ಡಿ.ಎಂ.ಎ. ಮತ್ತು 16 ಗ್ರಾಂ.ಕೊ ಕೇನ್ ಮಾದಕ ವಸ್ತುಗಳನ್ನು ಈಗಾಗಲೇ ನಾಶ ಮಾಡಿ ವಿಲೇವಾರಿ ಮಾಡಲಾಗಿತ್ತು ಎಂದು ಆಯುಕ್ತರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು