5:55 PM Thursday29 - January 2026
ಬ್ರೇಕಿಂಗ್ ನ್ಯೂಸ್
ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:…

ಇತ್ತೀಚಿನ ಸುದ್ದಿ

ಮಹಾನಗರ ಪಾಲಿಕೆ ನೌಕರರ ಬೇಡಿಕೆ ಈಡೇರಿಸಲು ಸರಕಾರ ವಿಫಲ: 10 ಪಾಲಿಕೆಗಳ ಆನಿರ್ಧಿಷ್ಟಾವಧಿ ಹೋರಾಟ ಮುಂದುವರಿಕೆ

12/07/2025, 21:54

ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು ವತಿಯಿಂದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಇಂದು ನಗರಾಭಿವೃದ್ದಿ ಕಾರ್ಯದರ್ಶಿಗಳ ಜೊತೆಯಲ್ಲಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ರವರು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೆ.ಷಡಕ್ಷರಿರವರು, ಸಚಿವಾಲಯ ನೌಕರರ ಸಂಘದ ಅಧ್ಯಕ್ಷರಾದ ರಮೇಶ್ ಸಂಗಾರವರು ಮತ್ತು ಹತ್ತು ಮಹಾನಗರ ಪಾಲಿಕೆ ಅಧ್ಯಕ್ಷರು, ಪದಾಧಿಕಾರಿಗಳ ಜೊತೆಯಲ್ಲಿ ಚರ್ಚೆ ಜರುಗಿತು.
ಮಹಾನಗರ ಪಾಲಿಕೆ ನೌಕರರ ಸಂಘದ ನ್ಯಾಯಯುತ ಬೇಡಿಕೆಗಳು ಈಡೇರಿಸಲು ಸರ್ಕಾರ ವಿಫಲವಾಗಿದೆ, ಕಾರ್ಯದರ್ಶಿಗಳ ಜತೆಯಲ್ಲಿ ನಡೆದ ಚರ್ಚೆ ಯಾವುದೇ ಫಲಪ್ರದವಾಗಿಲ್ಲ ಅದ್ದರಿಂದ ಅನಿರ್ಧಿಷ್ಟಾವಧಿ ಮುಷ್ಕರ ಮುಂದುವರೆಯಲಿದೆ.

*ಬೇಡಿಕೆಗಳು;*
7ನೇ ವೇತನ ಆಯೋಗದ ವರದಿ ಮಹಾನಗರ ಪಾಲಿಕೆ ನೌಕರರಿಗೆ ವಿಸ್ತರಣೆ, ವೃಂದ ಮತ್ತು ನೇಮಕಾತಿಯಲ್ಲಿ ತಿದ್ದುಪಡಿ ಹಾಗೂ ಕೆಜಿಐಡಿ ಮತ್ತು ಜಿಪಿಎಫ್ ಸೌಲಭ್ಯ ಹಾಗೂ ಆರೋಗ್ಯ ಸಂಜೀವಿನಿ ಯೋಜನೆ ಜಾರಿಯಾಗಬೇಕು. ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರಿಗೆ ಪ್ರತಿವರ್ಷ ಕ್ರೀಡಾಕೂಟ ಆಯೋಜನೆ ಮಾಡಬೇಕು. ಮಹಾನಗರ ಪಾಲಿಕೆಯಲ್ಲಿ ಹಲವಾರು ವರ್ಷಗಳಿಂದ ಮುಂಬಡ್ತಿ ನೀಡಿಲ್ಲ ಇಷ್ಟು ನ್ಯಾಯಯುತ ಬೇಡಿಕೆಗಳು
ಹುಬಳ್ಳಿ-ಧಾರವಾಡ, ತುಮಕೂರು, ಮಂಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ವಿಜಯಪುರ ಹಾಗೂ ಕಲಬುರಗಿ, ಬೆಳಗಾಂ, ಬಳ್ಳಾರಿ ಮಹಾನಗರ ಪಾಲಿಕೆಗಳು ಹೋರಾಟ ಮುಂದುವರೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು