1:45 PM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಮಹಾನಗರ ಪಾಲಿಕೆ ನೌಕರರ ಬೇಡಿಕೆ ಈಡೇರಿಸಲು ಸರಕಾರ ವಿಫಲ: 10 ಪಾಲಿಕೆಗಳ ಆನಿರ್ಧಿಷ್ಟಾವಧಿ ಹೋರಾಟ ಮುಂದುವರಿಕೆ

12/07/2025, 21:54

ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು ವತಿಯಿಂದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಇಂದು ನಗರಾಭಿವೃದ್ದಿ ಕಾರ್ಯದರ್ಶಿಗಳ ಜೊತೆಯಲ್ಲಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ರವರು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೆ.ಷಡಕ್ಷರಿರವರು, ಸಚಿವಾಲಯ ನೌಕರರ ಸಂಘದ ಅಧ್ಯಕ್ಷರಾದ ರಮೇಶ್ ಸಂಗಾರವರು ಮತ್ತು ಹತ್ತು ಮಹಾನಗರ ಪಾಲಿಕೆ ಅಧ್ಯಕ್ಷರು, ಪದಾಧಿಕಾರಿಗಳ ಜೊತೆಯಲ್ಲಿ ಚರ್ಚೆ ಜರುಗಿತು.
ಮಹಾನಗರ ಪಾಲಿಕೆ ನೌಕರರ ಸಂಘದ ನ್ಯಾಯಯುತ ಬೇಡಿಕೆಗಳು ಈಡೇರಿಸಲು ಸರ್ಕಾರ ವಿಫಲವಾಗಿದೆ, ಕಾರ್ಯದರ್ಶಿಗಳ ಜತೆಯಲ್ಲಿ ನಡೆದ ಚರ್ಚೆ ಯಾವುದೇ ಫಲಪ್ರದವಾಗಿಲ್ಲ ಅದ್ದರಿಂದ ಅನಿರ್ಧಿಷ್ಟಾವಧಿ ಮುಷ್ಕರ ಮುಂದುವರೆಯಲಿದೆ.

*ಬೇಡಿಕೆಗಳು;*
7ನೇ ವೇತನ ಆಯೋಗದ ವರದಿ ಮಹಾನಗರ ಪಾಲಿಕೆ ನೌಕರರಿಗೆ ವಿಸ್ತರಣೆ, ವೃಂದ ಮತ್ತು ನೇಮಕಾತಿಯಲ್ಲಿ ತಿದ್ದುಪಡಿ ಹಾಗೂ ಕೆಜಿಐಡಿ ಮತ್ತು ಜಿಪಿಎಫ್ ಸೌಲಭ್ಯ ಹಾಗೂ ಆರೋಗ್ಯ ಸಂಜೀವಿನಿ ಯೋಜನೆ ಜಾರಿಯಾಗಬೇಕು. ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರಿಗೆ ಪ್ರತಿವರ್ಷ ಕ್ರೀಡಾಕೂಟ ಆಯೋಜನೆ ಮಾಡಬೇಕು. ಮಹಾನಗರ ಪಾಲಿಕೆಯಲ್ಲಿ ಹಲವಾರು ವರ್ಷಗಳಿಂದ ಮುಂಬಡ್ತಿ ನೀಡಿಲ್ಲ ಇಷ್ಟು ನ್ಯಾಯಯುತ ಬೇಡಿಕೆಗಳು
ಹುಬಳ್ಳಿ-ಧಾರವಾಡ, ತುಮಕೂರು, ಮಂಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ವಿಜಯಪುರ ಹಾಗೂ ಕಲಬುರಗಿ, ಬೆಳಗಾಂ, ಬಳ್ಳಾರಿ ಮಹಾನಗರ ಪಾಲಿಕೆಗಳು ಹೋರಾಟ ಮುಂದುವರೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು