4:21 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಪುದು ಗ್ರಾಮ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಪೀಕರ್ ಖಾದರ್ ಉದ್ಘಾಟನೆ

13/07/2025, 10:58

ಬಂಟ್ವಾಳ(reporterkarnataka.com): ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು ಉದ್ಘಾಟಿಸಿದರು.


ಈ ವೇಳೆ ಮಾತನಾಡಿದ ಅವರು, ತನ್ನನ್ನು ಶಾಸಕನಾಗಿ, ಸಚಿವನಾಗಿ, ವಿಪಕ್ಷ ಉಪನಾಯಕನಾಗಿ ಹಾಗೂ ವಿಧಾನಸಭಾಧ್ಯಕ್ಷನಾಗಿ ಆಯ್ಕೆ ಮಾಡುವಲ್ಲಿ ಪುದು ಗ್ರಾಮಸ್ಥರ ಸಹಕಾರ ವಿಶೇಷವಾಗಿದ್ದು, ಪ್ರಸ್ತುತ ಗ್ರಾಮಕ್ಕೆ ೨.೧೦ ಕೋಟಿ ರೂ. ಅನುದಾನ ನೀಡಿ ಶೀಘ್ರ ಅದರ ಕಾಮಗಾರಿಗಳು ಆರಂಭಗೊಳ್ಳಲಿದೆ. ೨೪ ಗಂಟೆಯೂ ಕುಡಿಯುವ ನೀರು ಪೂರೈಸುವ ಯೋಜನೆಯ ಕಾಮಗಾರಿಯೂ ಕೊನೆಯ ಹಂತದಲ್ಲಿದೆ ಎಂದರು.
ಸ್ಥಳೀಯ ಸಾಮಾಜಿಕ ಮುಂದಾಳು ಅಬೂಬಕ್ಕರ್ ಕುಂಜತ್ಕಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಅತಿಥಿಗಳಾಗಿ ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್ ಫರಂಗಿಪೇಟೆ, ಗ್ರಾ.ಪಂ.ಉಪಾಧ್ಯಕ್ಷ ಇಕ್ಬಾಲ್ ಸುಜೀರು, ಮಾಜಿ ಅಧ್ಯಕ್ಷರಾದ ರಮ್ಲಾನ್ ಮಾರಿಪಳ್ಳ, ಮೊಹಮ್ಮದ್ ಹನೀಫ್, ತ್ವಾಹ ಜುಮಾ ಮಸೀದಿ ಅಧ್ಯಕ್ಷ ಎಸ್.ಹಸನಬ್ಬ, ಧರ್ಮಗುರು ರಹಮಾ ಶಾಫಿ ಕೊಡಗು, ಮಾಜಿ ತಾ.ಪಂ.ಸದಸ್ಯ ಇಕ್ಬಾಲ್ ದರ್ಬಾರ್, ಗ್ರಾ.ಪಂ.ಸದಸ್ಯರಾದ ಅಬೂಬಕ್ಕರ್ ನಝೀರ್, ಇಶಾಮ್ ಫರಂಗಿಪೇಟೆ, ರಝಾಕ್ ಅಮ್ಮೆಮಾರ್, ಇಕ್ಬಾಲ್ ಪಾಡಿ, ಹನ್ಸ್ ಅಮ್ಮೆಮಾರ್, ಉದ್ಯಮಿ ಅಬ್ದುಲ್ ರಹಿಮಾನ್, ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ಪಿಎಸ್‌ಐ ಸುತೇಶ್ ಕೆ.ಪಿ, ಪ್ರಮುಖರಾದ ಮಹಮ್ಮದ್ ಬುಕಾರಿ, ನಜೀರ್ ಎನ್.ಎಂ, ನಿಜಾಮ್, ಶಾಕೀರ್, ಇಸ್ಮಾಯಿಲ್ ಐ.ಕೆ., ಅಬೂಬಕ್ಕರ್ ಸಿದ್ದೀಕ್, ಇಸ್ಮಾಯಿಲ್ ಕುಂಜತ್ಕಳ, ಲತೀಫ್ ಕರ್ಮಾರ್, ಶರೀಫ್, ನಿಶಾರ್, ಖಾಲಿದ್, ಸಫ್ವಾನ್ ಮೊದಲಾದವರಿದ್ದರು.
ಕೆ. ಮಹಮ್ಮದ್ ಮುಸ್ತಾಫ ಸ್ವಾಗತಿಸಿದರು. ಇರಾ ಗ್ರಾ.ಪಂ.ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು