10:12 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Bangaluru | 4 ಷರತ್ತುಗಳೊಂದಿಗೆ ಜಮೀನು ನೀಡಲು ಒಪ್ಪಿಗೆ: ರೈತರ ನಿಯೋಗ ಮುಖ್ಯಮಂತ್ರಿ ಭೇಟಿ

13/07/2025, 11:16

ಬೆಂಗಳೂರು(reporterkarnataka.com): ದೇವನಹಳ್ಳಿ ತಾಲ್ಲೂಕು, ಚನ್ನರಾಯಪಟ್ಟಣ ಹೋಬಳಿಯ ರೈತ ಹೋರಾಟ ಸಮಿತಿಯ ನಿಯೋಗ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಅರ್ಪಿಸಿತು. ನಾಲ್ಕು ಶರತ್ತುಗಳನ್ನು ಹಾಕಿ ತಮ್ಮ ಜಮೀನು ಖರೀದಿಗೆ ಒಪ್ಪಿಗೆ ಇರುವುದಾಗಿ ನಿಯೋಗ ತನ್ನ ಮನವಿಯಲ್ಲಿ ತಿಳಿಸಿದೆ.


ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯಿಂದ ಆಗಮಿಸಿದ್ದ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ 449 ಎಕರೆಯನ್ನು ತಾವು ನೀಡಲು ಸಿದ್ಧವಿರುವುದಾಗಿ ತಿಳಿಸಿ, ಸ್ವಾಧೀನ ಪಡಿಸಿಕೊಳ್ಳುವ ಭೂಮಿಗೆ ನ್ಯಾಯಯುತವಾದ ಸೂಕ್ತ ಬೆಲೆ ನಿಗದಿ ಪಡಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಸಚಿವರಾದ ಕೆ ಎಚ್ ಮುನಿಯಪ್ಪ, ಬಿ ಎಸ್ ಸುರೇಶ್, ಕಾನೂನು ಸಲಹೆಗಾರರಾದ ಎ ಎಸ್ ಪೊನ್ನಣ್ಣ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು