11:10 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ನೀಲೇಶ್ವರ: ಹಿರಿಯ ಪತ್ರಕರ್ತ ಗಂಗಾಧರ ಪಿಲಿಯೂರುಗೆ ‘ಪತ್ರಿಕಾ ದಿನ ಪ್ರಶಸ್ತಿ’ ಪ್ರದಾನ

13/07/2025, 14:40

ಕಾಸರಗೋಡು(reporterkarnataka.com):ಕಾಸರಗೋಡು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕಾಸರಗೋಡು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ‘ಪತ್ರಿಕಾ ದಿನ ಪ್ರಶಸ್ತಿ’ಯನ್ನು ಇಂದು ನೀಲೇಶ್ವರದ ತಾಜ್ ಕ್ರೂಸ್ ಬೋಟ್ ಹೌಸ್ ನಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಗಂಗಾಧರ ಪಿಲಿಯೂರು ಅವರಿಗೆ ಪ್ರದಾನಿಸಲಾಯಿತು.
ಗಂಗಾಧರ ಪಿಲಿಯೂರು ಅವರು ರಾಜ್ಯಮಟ್ಟದ ಹಲವು ಕನ್ನಡ ದಿನಪತ್ರಿಕೆ, ಸಂಜೆ ಪತ್ರಿಕೆ ಹಾಗೂ ವಾರ ಪತ್ರಿಕೆಗಳಲ್ಲಿ ದುಡಿದು ಅನುಭವ ಹೊಂದಿದ್ದಾರೆ‌. ರಂಗ ಕಲಾವಿದನೂ ಆಗಿರುವ ಅವರು ನಾಟಕ ನಿರ್ದೇಶನ ಕೂಡ ಮಾಡಿದ್ದಾರೆ. ಪತ್ರಿಕಾ ರಂಗದಲ್ಲಿ ಅವರು ನೀಡಿದ ಅನುಪಮ ಸೇವೆಯ ಹಿನ್ನೆಲೆಯಲ್ಲಿ ಅವರಿಗೆ ಪ್ರಶಸ್ತಿ ದೊರೆತಿದೆ.


ರಾಜ್ಯ ಮಾಹಿತಿ ಆಯುಕ್ತ ಬದ್ರುದ್ದೀನ್ ಮಾಣಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಗಂಗಾಧರ ಪಿಲಿಯೂರು ಅವರ ಪತ್ನಿ ಧನ್ಯಾ ಜಿ. ಪಿಲಿಯೂರು ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು