7:26 AM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ ಸಚಿವ ಗಡ್ಕರಿ ಇಂದು ಉದ್ಘಾಟನೆ

13/07/2025, 23:01

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ಅಡ್ಡಲಾಗಿ ನಿರ್ಮಾಣ ಮಾಡಿರುವ ಸೇತುವೆಯ ಉದ್ಘಾಟನೆ ಜುಲೈ 14 ರಂದು ನಡೆಯಲಿದೆ.
ಕೇಂದ್ರದ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ನಡೆಸಲಿದ್ದಾರೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು 423 ಕೋಟಿ ರೂ. ವೆಚ್ಚದ ಎರಡು ಕಾಲು ಕಿಮೀ ಉದ್ದದ ಸೇತುವೆ ಅದಾಗಿದ್ದು ನಮ್ಮ ದೇಶದಲ್ಲೇ ಅತೀ ಉದ್ದದ ಟೆಕ್ನಾಲಜಿ ಬಳಸಿ ಮಾಡಿರುವ ಸೇತುವೆ ಆಗಿದೆ. ಇದು ನಮ್ಮ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಅದೊಂದು ಪ್ರವಾಸೋದ್ಯಮ ಕ್ಷೇತ್ರ ಆಗಬಹುದು ಎಂಬ ನಿರೀಕ್ಷೆ ಇದೆ ಎಂದರು.
ಅಂದು ಬೆಳಗ್ಗೆ 10:30 ಕ್ಕೆ ನಿತಿನ್ ಗಡ್ಕರಿ ಉದ್ಘಾಟನೆ ಮಾಡಲಿದ್ದಾರೆ. ನಂತರ ಚೌಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಆ ನಂತರ ಮಧ್ಯಾಹ್ನ 12 ಗಂಟೆಗೆ ಸಾಗರದ ನೆಹರು ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಈ ಸಭಾ ಕಾರ್ಯಕ್ರಮಕ್ಕೆ ಹತ್ತು ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಾಗರ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಾಜಿ ಶಾಸಕರಾದ ಹರತಾಳು ಹಾಲಪ್ಪ, ಸೇರಿ ಹಲವರು ಭಾಗಿಯಾಗಲಿದ್ದಾರೆ ಎಂದರು.
ಇಲ್ಲಿಯವರೆಗೆ ಲಾಂಚ್ ಬಳಕೆ ಮಾಡುತ್ತಿದ್ದರು. ಅದರಲ್ಲೂ ಒಂದು ಬಾರಿ ಲಾಂಚ್ ಮುಳುಗಿ 22 ಮಂದಿ ಮೃತಪಟ್ಟಿದ್ದರು. ಪಶ್ಚಿಮ ಘಟ್ಟದಲ್ಲಿ ಹಲವಾರು ಡ್ಯಾಮ್ ಆಗಿವೆ. ಆದರೆ ಅಲ್ಲಿನ ಸಂತ್ರಸ್ತರಿಗೆ ಯಾವ ಸರ್ಕಾರವೂ ಆದ್ಯತೆ ಕೊಟ್ಟಿಲ್ಲ. ಈಗ ಸೇತುವೆ ಆಗುವುದರಿಂದ ಅಲ್ಲಿನ ಜನರ ಕನಸು ನನಸಾಗುವ ದಿನ ಎಂದರು.
ಶಿವಮೊಗ್ಗ ಜಿಲ್ಲೆ ಅಭಿವೃದ್ಧಿ ಆಗಿರುವುದು ನೋಡಿದರೆ ಪವಾಡ ಎನಿಸುತ್ತದೆ. ಶಿವಮೊಗ್ಗಕ್ಕೆ ಒಂದೋ ಎರಡೋ ರೈಲು ಇತ್ತು. ಈಗ ಜನವರಿಯಿಂದ ಎರಡು ವಂದೇ ಭಾರತ್ ರೈಲು ಓಡಾಡಲಿದೆ. ಹಾಗೆ ಹಲವಾರು ರೈಲುಗಳು ಶಿವಮೊಗ್ಗದಲ್ಲಿ ಓಡಾಡುತ್ತದೆ. ವಿಮಾನ ನಿಲ್ದಾಣ, ಜಿಲ್ಲೆಯಲ್ಲಿ ರಸ್ತೆಗಳು, ಸೇತುವೆಗಳು ಹೀಗೆ ಸಾಕಷ್ಟು ಕಾಮಗಾರಿಗಳು ಜಿಲ್ಲೆಯಲ್ಲಿ ಆಗಿದೆ. ಅಭಿವೃದ್ಧಿಯ ಮಹಾಪೂರವನ್ನೇ ನಾವು ಮಾಡಿಸಿದ್ದೇವೆ ಎಂದರು.
ಸಿಗಂದೂರು ಸೇತುವೆ ವಿಚಾರದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ಸೇತುವೆ ಆಗಿದೆ ಎಂದು ಎಲ್ಲರೂ ಸಂತೋಷ ಪಡಬೇಕು. ಕಲ್ಪನೆ ಮಾಡಲು ಆಗದ ಸೇತುವೆ ನಿರ್ಮಾಣ ಆಗಿದೆ. ನಮ್ಮ ಪಕ್ಷದ ವತಿಯಿಂದ ಸಿಗಂದೂರು ಚೌಡೇಶ್ವರಿ ಸೇತುವೆ ಎಂಬ ಹೆಸರು ಇಡಲು ಸೂಚಿಸಿದ್ದೇವೆ. ಯಡಿಯೂರಪ್ಪನವರ ಹೆಸರು ಕೇಳಿ ಬಂದಿದೆ. ಆದರೆ ಸಿಗಂದೂರು ಚೌಡೇಶ್ವರಿ ಎಂಬ ಹೆಸರು ಸೂಕ್ತ ಎಂದರು.
ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಸಂದೇಶ ಜವಳಿ, ಸೊಪ್ಪುಗುಡ್ಡೆ ರಾಘವೇಂದ್ರ, ಕುಕ್ಕೆ ಪ್ರಶಾಂತ್, ಸಂತೋಷ್ ದೇವಾಡಿಗ,ಕುರವಳ್ಳಿ ಪ್ರಮೋದ್ ಪೂಜಾರಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು