2:41 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಕಲಾ ಪ್ರಕಾರದಿಂದ ಧರ್ಮಜಾಗೃತಿಯೊಂದಿಗೆ ಆನಂದ: ರಾಷ್ಟ್ರ ಪ್ರಶಸ್ತಿ ವಿಜೇತ ಯಕ್ಷಗಾನ ಕಲಾವಿದ ಸೂರಿಕುಮೇರು ಗೋವಿಂದ ಭಟ್

13/07/2025, 23:52

ಬಂಟ್ವಾಳ(reporterlarnataka.com): ಯಾವುದೇ ಕಲಾ ಪ್ರಕಾರ ಧರ್ಮ ಪ್ರಕಾರ ಧರ್ಮಜಾಗೃತಿಯನ್ನು ಮಾಡಬೇಕು. ಆನಂದವನ್ನು ನೀಡಬೇಕು ಎಂದು ಹಿರಿಯ ಯಕ್ಷಗಾನ ಕಲಾವಿದ ದಶಾವತಾರಿ ರಾಷ್ಟ್ರ ಪ್ರಶಸ್ತಿ ವಿಜೇತ ಕೆ. ಗೋವಿಂದ ಭಟ್ ಹೇಳಿದರು.
ಅವರು ಬಿ.ಸಿ. ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಸಂಸ್ಕಾರ ಭಾರತೀ ದ.ಕ.ಜಿಲ್ಲಾ ಬಂಟ್ವಾಳ ಘಟಕದ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ನಟರಾಜ ಪೂಜನ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕಲೆ ಎಂಬುದು ಅಮೂರ್ತವಾದುದು. ಕಲೆಗಳ ಮೂಲ ಉದ್ದೇಶವಿರುವುದು ಜನರ ಶಾಂತಿ, ಸಮಾಧಾನ. ಯಕ್ಷಗಾನವು ಸೃಜನಶೀಲ ಕಲೆಯಾಗಿದ್ದು ಕಾಲಕ್ಕೆ ತಕ್ಕಂತೆ ಬದಲಾವಣೆಯಾಗಿದ್ದು, ಸತ್ಯ, ಸಾಕ್ಷತ್ಕಾರವೇ ಕಲೆಯ ಪರಮ ಗುರಿ ಎಂದು ಹೇಳಿದರು.
ಹಿರಿಯ ಯಕ್ಷಗಾನ ಕಲಾವಿದ ಶಿವರಾಮ ಜೋಗಿ ಅಭಿನಂದನಾ ಭಾಷಣ ಮಾಡಿ ಮೇರು ವ್ಯಕ್ತಿತ್ವ ಹಾಗೂ ವಿದ್ವತ್ತು ಹೊಂದಿರುವ ಗೋವಿಂದ ಭಟ್ಟರಿಗೆ ತನ್ನೊಂದಿಗೆ ಇತರ ಕಲಾವಿದರನ್ನೂ ರಂಗದಲ್ಲಿ ಬೆಳೆಸಿದ್ದಾರೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ ಸಂಸ್ಕಾರ ಭಾರತೀ ಜಿಲ್ಲಾಧ್ಯಕ್ಷರಾದ ತೇವು ತಾರಾನಾಥ ಕೊಟ್ಟಾರಿ ಮಾತನಾಡಿ, ಸನಾತನ ಹಿಂದೂ ಧರ್ಮದ ಪರಂಪರೆಯೇ ಗುರು- ಶಿಷ್ಯ ಸಂಸ್ಕೃತಿ. ಗುರುವನ್ನು ಮರೆಯದ ಕ್ಷೇತ್ರವಿದ್ದರೆ ಅದು ಕಲಾ ಕ್ಷೇತ್ರ. ಕಲೆಯು ವ್ಯಕ್ತಿಯ ವಿಕಸನದೊಂದಿಗೆ ರಾಷ್ಟ್ರದ ವಿಕಾಸಕ್ಕೆ ಪೂರಕವಾಗಿದೆ. ಧರ್ಮ ಸಂಸ್ಕೃತಿ, ಸಂಸ್ಕಾರವನ್ನು ಸೇವೆ ಮತ್ತು ತ್ಯಾಗದ ಮೂಲಕ ಉಳಿಸಿ ಬೆಳೆಸುವ ಕಾರ್ಯ ನಡೆಯುತ್ತಿದೆ ಎಂದರು.
ಪ್ರಮುಖರಾದ ಸಂಘ ಚಾಲಕ ಡಾ. ಬಾಲಕೃಷ್ಣ ಬಿ.ಸಿ.ರೋಡ್, ಉಪಾಧ್ಯಕ್ಷರಾದ ಶಶಿ ಕುಮಾರ್ ಇಂದ್ರ ವೇಣೂರು, ಕೋಶಾಧಿಕಾರಿ ವಿಜಯ ಶೆಟ್ಟಿ ಸಾಲೆತ್ತೂರ್, ಸಂಕಪ್ಪ ಶೆಟ್ಟಿ ಬಿ. ಸಿ.ರೋಡ್, ಜನಾರ್ದನ ಅಮುoಜೆ ಮತ್ತಿತರರಿದ್ದರು.
ಜಿಲ್ಲಾ ಗೌರವಾಧ್ಯಕ್ಷ ಸರಪಾಡಿ ಅಶೋಕ್ ಶೆಟ್ಟಿ ಪ್ರಾಸ್ತಾವಿಕ ವಾಗಿ ಮಾತನಾಡಿದರು, ಸಂಸ್ಕಾರ ಭಾರತೀ ಜಿಲ್ಲಾ ಉಪಾಧ್ಯಕ್ಷ ಅನಿಲ್ ಪಂಡಿತ್ ಸ್ವಾಗತಿಸಿ, ಮಾನಸ ಕಡೆಗೋಳಿ ಸಂಸ್ಕಾರ ಧ್ಯೇಯ ಗೀತೆ ಹಾಡಿದರು, ವಿಜಯ ಶೆಟ್ಟಿ ಸಾಲೆತ್ತೂರು ಸನ್ಮಾನ ಪತ್ರವಾಚಿಸಿದರು, ಜಗದೀಶ ಕಡೆಗೋಳಿ ಧನ್ಯವಾದವಿತ್ತರು, ಮಹಿಮಾ ಬಿ. ರೈ ಸಾಲೆತ್ತೂರು ಕಾರ್ಯಕ್ರಮ ನಿರೂಪಿಸಿ, ಜಗದೀಶ ಕಡೆಗೋಳಿ ವಂದಿಸಿದರು.
ಸೂರಿಕುಮೇರು ಕೆ ಗೋವಿಂದ ಭಟ್ ರೊಡನೆ ಸಂವಾದ ಕಾರ್ಯಕ್ರಮ ನಡೆಯಿತು.
ಆರಂಭದಲ್ಲಿ ಉಪನ್ಯಾಸಕ ಜಯಾನಂದ ಪೆರಾಜೆ ಹಾಗೂ ಡಾ.ವಾರಿಜ ನಿರ್ಬೈಲು ಅವರು ಗಮಕ ಕಾರ್ಯಕ್ರಮ ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು