12:04 AM Wednesday16 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಕಲಾ ಪ್ರಕಾರದಿಂದ ಧರ್ಮಜಾಗೃತಿಯೊಂದಿಗೆ ಆನಂದ: ರಾಷ್ಟ್ರ ಪ್ರಶಸ್ತಿ ವಿಜೇತ ಯಕ್ಷಗಾನ ಕಲಾವಿದ ಸೂರಿಕುಮೇರು ಗೋವಿಂದ ಭಟ್

13/07/2025, 23:52

ಬಂಟ್ವಾಳ(reporterlarnataka.com): ಯಾವುದೇ ಕಲಾ ಪ್ರಕಾರ ಧರ್ಮ ಪ್ರಕಾರ ಧರ್ಮಜಾಗೃತಿಯನ್ನು ಮಾಡಬೇಕು. ಆನಂದವನ್ನು ನೀಡಬೇಕು ಎಂದು ಹಿರಿಯ ಯಕ್ಷಗಾನ ಕಲಾವಿದ ದಶಾವತಾರಿ ರಾಷ್ಟ್ರ ಪ್ರಶಸ್ತಿ ವಿಜೇತ ಕೆ. ಗೋವಿಂದ ಭಟ್ ಹೇಳಿದರು.
ಅವರು ಬಿ.ಸಿ. ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಸಂಸ್ಕಾರ ಭಾರತೀ ದ.ಕ.ಜಿಲ್ಲಾ ಬಂಟ್ವಾಳ ಘಟಕದ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ನಟರಾಜ ಪೂಜನ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕಲೆ ಎಂಬುದು ಅಮೂರ್ತವಾದುದು. ಕಲೆಗಳ ಮೂಲ ಉದ್ದೇಶವಿರುವುದು ಜನರ ಶಾಂತಿ, ಸಮಾಧಾನ. ಯಕ್ಷಗಾನವು ಸೃಜನಶೀಲ ಕಲೆಯಾಗಿದ್ದು ಕಾಲಕ್ಕೆ ತಕ್ಕಂತೆ ಬದಲಾವಣೆಯಾಗಿದ್ದು, ಸತ್ಯ, ಸಾಕ್ಷತ್ಕಾರವೇ ಕಲೆಯ ಪರಮ ಗುರಿ ಎಂದು ಹೇಳಿದರು.
ಹಿರಿಯ ಯಕ್ಷಗಾನ ಕಲಾವಿದ ಶಿವರಾಮ ಜೋಗಿ ಅಭಿನಂದನಾ ಭಾಷಣ ಮಾಡಿ ಮೇರು ವ್ಯಕ್ತಿತ್ವ ಹಾಗೂ ವಿದ್ವತ್ತು ಹೊಂದಿರುವ ಗೋವಿಂದ ಭಟ್ಟರಿಗೆ ತನ್ನೊಂದಿಗೆ ಇತರ ಕಲಾವಿದರನ್ನೂ ರಂಗದಲ್ಲಿ ಬೆಳೆಸಿದ್ದಾರೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ ಸಂಸ್ಕಾರ ಭಾರತೀ ಜಿಲ್ಲಾಧ್ಯಕ್ಷರಾದ ತೇವು ತಾರಾನಾಥ ಕೊಟ್ಟಾರಿ ಮಾತನಾಡಿ, ಸನಾತನ ಹಿಂದೂ ಧರ್ಮದ ಪರಂಪರೆಯೇ ಗುರು- ಶಿಷ್ಯ ಸಂಸ್ಕೃತಿ. ಗುರುವನ್ನು ಮರೆಯದ ಕ್ಷೇತ್ರವಿದ್ದರೆ ಅದು ಕಲಾ ಕ್ಷೇತ್ರ. ಕಲೆಯು ವ್ಯಕ್ತಿಯ ವಿಕಸನದೊಂದಿಗೆ ರಾಷ್ಟ್ರದ ವಿಕಾಸಕ್ಕೆ ಪೂರಕವಾಗಿದೆ. ಧರ್ಮ ಸಂಸ್ಕೃತಿ, ಸಂಸ್ಕಾರವನ್ನು ಸೇವೆ ಮತ್ತು ತ್ಯಾಗದ ಮೂಲಕ ಉಳಿಸಿ ಬೆಳೆಸುವ ಕಾರ್ಯ ನಡೆಯುತ್ತಿದೆ ಎಂದರು.
ಪ್ರಮುಖರಾದ ಸಂಘ ಚಾಲಕ ಡಾ. ಬಾಲಕೃಷ್ಣ ಬಿ.ಸಿ.ರೋಡ್, ಉಪಾಧ್ಯಕ್ಷರಾದ ಶಶಿ ಕುಮಾರ್ ಇಂದ್ರ ವೇಣೂರು, ಕೋಶಾಧಿಕಾರಿ ವಿಜಯ ಶೆಟ್ಟಿ ಸಾಲೆತ್ತೂರ್, ಸಂಕಪ್ಪ ಶೆಟ್ಟಿ ಬಿ. ಸಿ.ರೋಡ್, ಜನಾರ್ದನ ಅಮುoಜೆ ಮತ್ತಿತರರಿದ್ದರು.
ಜಿಲ್ಲಾ ಗೌರವಾಧ್ಯಕ್ಷ ಸರಪಾಡಿ ಅಶೋಕ್ ಶೆಟ್ಟಿ ಪ್ರಾಸ್ತಾವಿಕ ವಾಗಿ ಮಾತನಾಡಿದರು, ಸಂಸ್ಕಾರ ಭಾರತೀ ಜಿಲ್ಲಾ ಉಪಾಧ್ಯಕ್ಷ ಅನಿಲ್ ಪಂಡಿತ್ ಸ್ವಾಗತಿಸಿ, ಮಾನಸ ಕಡೆಗೋಳಿ ಸಂಸ್ಕಾರ ಧ್ಯೇಯ ಗೀತೆ ಹಾಡಿದರು, ವಿಜಯ ಶೆಟ್ಟಿ ಸಾಲೆತ್ತೂರು ಸನ್ಮಾನ ಪತ್ರವಾಚಿಸಿದರು, ಜಗದೀಶ ಕಡೆಗೋಳಿ ಧನ್ಯವಾದವಿತ್ತರು, ಮಹಿಮಾ ಬಿ. ರೈ ಸಾಲೆತ್ತೂರು ಕಾರ್ಯಕ್ರಮ ನಿರೂಪಿಸಿ, ಜಗದೀಶ ಕಡೆಗೋಳಿ ವಂದಿಸಿದರು.
ಸೂರಿಕುಮೇರು ಕೆ ಗೋವಿಂದ ಭಟ್ ರೊಡನೆ ಸಂವಾದ ಕಾರ್ಯಕ್ರಮ ನಡೆಯಿತು.
ಆರಂಭದಲ್ಲಿ ಉಪನ್ಯಾಸಕ ಜಯಾನಂದ ಪೆರಾಜೆ ಹಾಗೂ ಡಾ.ವಾರಿಜ ನಿರ್ಬೈಲು ಅವರು ಗಮಕ ಕಾರ್ಯಕ್ರಮ ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು