7:53 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ ಕಂಬನಿ

14/07/2025, 20:28

ಬೆಂಗಳೂರು(reporterkarnataka.com): ಭಾರತೀಯ ಚಿತ್ರರಂಗದ ಖ್ಯಾತ ಚಿತ್ರನಟಿ ಬಿ.ಸರೋಜಾದೇವಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಿ.ಸರೋಜಾದೇವಿಯವರು ಕನ್ನಡ ನಾಡು ಕಂಡ ಪ್ರತಿಭಾವಂತ ಕಲಾವಿದರಾಗಿದ್ದರು. ಬಹುಭಾಷಾ ನಟಿಯಾಗಿದ್ದ ಅವರು ಅಪ್ರತಿಮ ಕಲಾವಿದರಾಗಿದ್ದು, ಅವರ ಸಾವಿನಿಂದ ಇಡೀ ಕಲಾಜಗತ್ತು ಬಡವಾಗಿದೆ. ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬವರ್ಗ ಹಾಗೂ ಅಭಿಮಾನಿ ಬಳಗಕ್ಕೆ ದು:ಖವನ್ನು ಭರಿಸುವ ಶಕ್ತಿ ತುಂಬಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ
ತಿಳಿಸಿದ್ದಾರೆ.
ಸರೋಜಾದೇವಿ ಅವರು ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರಕ್ಕೆ ನೈಜತೆ ತಂದಿದ್ದರು. ಅವರ ನಿಧನ ಕರ್ನಾಟಕದ ಕಲಾ‌ಕ್ಷೇತ್ರಕ್ಕೆ ಅತ್ಯಂತ ದುಃಖದ ದಿನ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,
ಅಭಿನಯ ಸರಸ್ವತಿ, ಚತುರ್ಭಾಷಾ ತಾರೆ ಪೌರಾಣಿಕ ಹಾಗೂ ಸಾಮಾಜಿಕ ಚಲನಚಿತ್ರಗಳಲ್ಲಿ ವಿಭಿನ್ನ ಪಾತ್ರವನ್ನು ಲೀಲಾಜಾಲವಾಗಿ ನಟಿಸುತ್ತಿದ್ದ ಸರೋಜಾದೇವಿ ಇನ್ನಿಲ್ಲ. ಒಂದು ಕಾಲದಲ್ಲಿ ಕನ್ನಡದ ಸೂಪರ್ ಸ್ಟಾರ್ ಆಗಿದ್ದ ಅವರು, ರಾಜಕುಮಾರ್ ಜೊತೆ, ತೆಲುಗಿನಲ್ಲಿ ಎನ್ ಟಿ ಆರ್ ಜೊತೆ, ಹಿಂದಿಯಲ್ಲಿ ದಿಲೀಪ್ ಕುಮಾರ್ ಜೊತೆ ನಟಿಸಿ ಇಡೀ ದೇಶದಲ್ಲಿ ಪ್ರಖ್ಯಾತ ನಟಿ ಆಗಿದ್ದರು.
ಕನ್ನಡದಲ್ಲಿ ಹೇಳಬೇಕಾದರೆ ಕಿತ್ತೂರು ರಾಣಿ ಚೆನ್ನಮ್ಮ ಪಾತ್ರಕ್ಕೆ ನೈಜತೆ ತಂದಿದ್ದರು. ಚೆನ್ನಮ್ಮ ಅಂದರೆ ಹೀಗಿದ್ದರು ಅಂತ ಕಲ್ಪನೆ ಮೂಡಿಸಿದ್ದರು. ಅವರ ಅಭಿನಯ, ಕಲ್ಪನೆ ಇಂದಿಗೂ ಮನಸ್ಸಿನಲ್ಲಿ ಇದೆ. ಚೆನ್ನಮ್ಮ ಬ್ರಿಟೀಷರ ವಿರುದ್ಧ ಹೇಗೆ ಹೋರಾಟ ಮಾಡಿದ್ದರು ಅಂತ ಅವರ ನಟನೆ ಮೂಲಕ ತೋರಿಸಿದ್ದರು ಎಂದರು.
ಮಲ್ಲಮ್ಮನ ಪವಾಡ ಇದೊಂದು ಮನೆಮನೆಯಲ್ಲಿ ಮನಮುಟ್ಟುವ ಚಿತ್ರವಾಗಿತ್ತು. ಲಕ್ಷ್ಮಿ ಸರಸ್ವತಿ, ಬಬ್ರುವಾಹನ, ಶ್ರೀನಿವಾಸ ಕಲ್ಯಾಣ ಸೇರಿದಂತೆ ನೂರಾರು ಚಿತ್ರಗಳಲ್ಲಿ ನಟನೆ ಮಾಡಿದ್ದರು‌. ಅಭಿನಯದ ಜೊತೆ ಗಾಂಭೀರತೆಯಲ್ಲಿ ಅಗ್ರಮಾನ್ಯರಾಗಿದ್ದರು. ಐದು ದಶಕದಿಂದ ಚಿತ್ರರಂಗದಲ್ಲಿ ನಟಿಸಿದ್ದು, ನಮ್ಮನ್ನೆಲ್ಲಾ ಅಗಲಿದ್ದಾರೆ. ಆದರೂ ಅವರ ಅಭಿನಯದ ಮೂಲಕ ನಮ್ಮ ಮನದಲ್ಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು